ಮೈಸೂರು

ರೋಗಿಗಳಿಗೆ ಅವಧಿ ಮುಗಿದ ಪದಾರ್ಥಗಳಿಂದ ಆಹಾರ ತಯಾರು: ಇಬ್ಬರು ಸಸ್ಪೆಂಡ್

ಮೈಸೂರು : ಮೈಸೂರಿನ ಐತಿಹಾಸಿಕ ಚಲುವಾಂಬ ಆಸ್ಪತ್ರೆಯಲ್ಲಿ ರೋಗಿಗಳಿಗೆ ಅವಧಿ ಮುಗಿದ ಆಹಾರ ಪದಾರ್ಥಗಳಿಂದ ತಯಾರಿಸಿದ ಆಹಾರಗಳನ್ನು ರೋಗಿಗಳಿಗೆ ನೀಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ.

ಇಂದು ಮೈಸೂರಿನ ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ ಹೆಚ್ ಕೃಷ್ಣ ಹಾಗೂ ಅವರ ನಿಯೋಗ ನಗರದ ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆಗೆ ದಿಡೀರ್ ಭೇಟಿ ನೀಡಿದ್ದು, ಆಸ್ಪತ್ರೆಯ ಸ್ವಚ್ಛತೆ ಹಾಗೂ ರೋಗಿಗಳಿಗೆ ನೀಡುವ ಆಹಾರದ ಗುಣಮಟ್ಟ ಪರಿಶೀಲಿಸುವ ವೇಳೆ ಚಲುವಾಂಬ ಆಸ್ಪತ್ರೆಯ ರೋಗಿಗಳಿಗೆ ಸರ್ಕಾರ ನೀಡುವ ಉಚಿತ ಆಹಾರಗಳನ್ನು ಅವಧಿ ಮುಗಿದ ರವೆ, ಅವಲಕ್ಕಿ, ಅಕ್ಕಿ ಹಾಗೂ ದ್ವಿದಳ ಧಾನ್ಯಗಳಿಂದ ತಯಾರಿಸಿ ರೋಗಿಗಳಿಗೆ ನೀಡುತ್ತಿರುವಾಗ ರಾಜ್ಯ ಆಹಾರ ಆಯೋಗಕ್ಕೆ ಸಿಕ್ಕಿ ಬಿದ್ದಿದ್ದಾರೆ. ನಿಯೋಗವು ಚಲುವಾಂಬ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಲೀಲಾವತಿ ಹಾಗೂ ಲಾರೆನ್ಸ್ ಎಂಬುವವರನ್ನು ಸಸ್ಪೆಂಡ್ ಮಾಡಿರುವುದಾಗಿ ತಿಳಿಸಿದ್ದಾರೆ.

ಆಸ್ಪತ್ರೆ ಪರಿಶೀಲನೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯೋಗ ಅಧ್ಯಕ್ಷ ಡಾ ಹೆಚ್ ಕೃಷ್ಣ, ಕೆ ಆರ್ ಆಸ್ಪತ್ರೆ ಹಾಗೂ ಚಲುವಾಂಬ ಆಸ್ಪತ್ರೆ ಆವರಣದಲ್ಲಿ ಸ್ವಚ್ಛ ಕುಡಿಯುವ ನೀರೇ ಸಿಗುತ್ತಿಲ್ಲ ಹಾಗೂ ಆಸ್ಪತ್ರೆಯ ಆವರಣ ಸ್ವಚ್ಛತೆಯಿಂದಲೂ ಕಾಣುತ್ತಿಲ್ಲ, ಈಗಾಗಿ ಕೂಡಲೇ ಶುದ್ಧ ನೀರಿನ ಘಟಕ ತೆರೆಯಬೇಕು ಎಂದು ಕೆ ಆರ್ ಆಸ್ಪತ್ರೆಯ ಡೀನ್ ಡಾ ದಾಕ್ಷಾಯಿಣಿ ಅವರಿಗೆ ತಿಳಿಸಿದರು.

ರೋಗಿಗಳಿಗೆ ಮೆನುವಿನ ಪ್ರಕಾರ ಆಹಾರ ನೀಡುತ್ತಿಲ್ಲ ಬದಲಿಗೆ ಬೇಕಾಬಿಟ್ಟೆ ನೀಡುತ್ತಿದ್ದಾರೆ, ಇದರಿಂದ ರೋಗಿಗಳ ಆರೋಗ್ಯದ ಮೇಲೆ ಪರಿಣಾಮ ಬೀರಳಿದೆ. ಕಳಪೆ ಆಹಾರ ನೀಡಿರುವ ಹಿನ್ನೆಲೆ ಅವಧಿ ಮುಗಿದ ಆಹಾರ ಪದಾರ್ಥಗಳನ್ನು ಸಂಗ್ರಹಿಸಿದ್ದು ಇದನ್ನು ಪರೀಕ್ಷೆಗೆಂದು ಲ್ಯಾಬ್ ಗೆ ಕಳುಹಿಸಲಾಗುವುದು. ವರದಿ ನಂತರ ಟೆಂಡರ್ದಾರರು ಹಾಗೂ ಆಡಳಿತ ಸಿಬ್ಬಂದಿಯ ಮೇಲೂ ಪ್ರಕರಣ ದಾಖಲಿಸುತ್ತೆವೆ ಎಂದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

15 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

56 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago