ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಮೇಟಗಳ್ಳಿ ಬಳಿ ನಡೆದಿದೆ.
ಬಿಎಂಶ್ರೀ ನಗರ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಸಚಿನ್(16) ಹಾಗೂ ಮಹದೇವ ಎಂಬವರ ಪುತ್ರ ಜನಾರ್ದನ್(25) ಎಂಬುವವರು ಅಪಘಾತದಲ್ಲಿ ಮೃತಪಟ್ಟವರು.
ಫ್ಲಂಬರ್ ಕೆಲಸ ಮಾಡುತ್ತಿದ್ದ ಜನಾರ್ದನ್ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಚಿನ್ ಅವರು ಶನಿವಾರ ತಡರಾತ್ರಿ ಯಮಹಾ ಬೈಕ್ನಲ್ಲಿ ಮೇಟಗಳ್ಳಿಯ ರಾಯಲ್ ಇನ್ ಜಂಕ್ಷನ್ ಕಡೆಯಿಂದ ಬಿಎಂಶ್ರೀ ನಗರಕ್ಕೆ ತೆರಳುತ್ತಿದ್ದರು. ಈ ವೇಳೆ ಜನಾರ್ದನ್ ಬೈಕ್ ಚಾಲನೆ ಮಾಡುತ್ತಿದ್ದರು.
ಈ ವೇಳೆ ಮೇಟಗಳ್ಳಿಯ ಜಿಲ್ಲಾಸ್ಪತ್ರೆ ಮುಂಭಾಗ ಬೈಕ್ ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಹೀಗಾಗಿ ರಸ್ತೆ ಡಿವೈಡರ್ಗೆ ಗುದ್ದಿ ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಸವಾರರಿಬ್ಬರೂ ಕೆಳಗೆ ಬಿದ್ದು ಇಬ್ಬರಿಗೂ ಗಂಭೀರ ಗಾಯಗಳಾಗಿವೆ. ಕೂಡಲೇ ಸಾರ್ವಜನಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರಾದರೂ ಅಷ್ಟರಲ್ಲಿ ಮೃತಪಟ್ಟಿದ್ದರು.
ವಿಷಯ ತಿಳಿದ ವಿ.ವಿ.ಪುರಂ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹೆಲ್ಮೆಟ್ ಧರಿಸಿರಲಿಲ್ಲ: ದ್ವಿಚಕ್ರ ವಾಹನ ಚಾಲನೆ ವೇಳೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಪೊಲೀಸರು ಪದೇ ಪದೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾರೆ. ಆದರೆ, ಚಾಲಕರು ವಾತ್ರ ಗಂಭೀರವಾಗಿ ಪರಿಗಣಿಸುವುದಿಲ್ಲ. ಶನಿವಾರ ರಾತ್ರಿ ನಡೆದ ಅಫಘಾತದಲ್ಲಿ ಸಾವನ್ನಪ್ಪಿದ ಸವಾರರಿಬ್ಬರು ಹೆಲ್ಮೆಟ್ ಧರಿಸಿದ್ದರೇ ಬದುಕಿರುತ್ತಿದ್ದರು.
ನಂಜನಗೂಡು : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಹಿಳೆಯ ಕುಟುಂಬಕ್ಕೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ನೆರವು ನೀಡಿದ್ದಾರೆ. ನಂಜನಗೂಡು…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ ಪ್ರದೇಶದಲ್ಲಿ ರಸ್ತೆ ಅಗಲೀಕರಣ ಮತ್ತು ತಡೆಗೋಡೆ ದುರಸ್ತಿ ಕಾಮಗಾರಿ ನಡೆಯುತ್ತಿರುವಾಗ…
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…