ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಾದ್ಯಂತ ಮನೆಗಳು, ದೇವಸ್ಥಾನಗಳಲ್ಲಿ ಬೇವು-ಬೆಲ್ಲದ ತಯಾರಿಕೆ, ವಿಶೇಷ ಪೂಜೆಗಳಿಗೆ ಭರದ ಸಿದ್ಧತೆಗಳು ನಡೆದಿವೆ.
ಅರಮನೆ ಆವರಣದಲ್ಲಿ ಮಾರ್ಚ್ 19 ರಿಂದ 2-3 ದಿನಗಳ ಕಾಲ ‘ಯುಗಾದಿ ಸಂಗೀತೋತ್ಸವ’ ಆಯೋಜಿಸಲಾಗಿದೆ.
ದೇವರಾಜ ಮಾರುಕಟ್ಟೆ ಸೇರಿ ವಿವಿಧೆಡೆ ಯುಗಾದಿ ಹಬ್ಬದ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದ್ದು, ಮಾವು-ಬೇವಿನ ಸೊಪ್ಪು, ಹೂ, ಹಣ್ಣು ಸೇರಿದಂತೆ ಹಬ್ಬದ ಪರಿಕರಗಳ ಖರೀದಿ ಭರಾಟೆ ಜೋರಾಗಿದೆ. ಇನ್ನ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ವಸ್ತುಗಳ ಖರೀದಿಗೆ ಮೈಸೂರಿಗರು ಮುಗಿಬಿದ್ದಿದ್ದಾರೆ.
ಹೊಸಬಟ್ಟೆ ಖರೀದಿಗೆ ರಷ್…
ಹಿಂದೂ ಸಂಪ್ರದಾಯದ ಪ್ರಕಾರ ಯುಗಾದಿ ಹಬ್ಬವೇ ವರ್ಷದ ಮೊದಲ ಹಬ್ಬ. ಹೀಗಾಗಿ ಹೊಸ ಬಟ್ಟೆ ಖರೀದಿಗೆ ಜನರು ಮುಗಿಬಿದ್ರು. ಮಹಿಳೆಯರು ಸೀರೆ, ಬಳೆ, ಚೂಡಿದಾರ್, ಲೆಹಂಗಾ ಖರೀದಿಸಿದ್ರೆ, ಪುರುಷರು ಜೀನ್ಸ್ ಪ್ಯಾಂಟ್, ಪಂಚೆ, ಶರ್ಟ್ ಗಳನ್ನ ಕೊಂಡುಕೊಂಡರು. ಜನರ ದಟ್ಟಣೆ ಹೆಚ್ಚಾದ ಪರಿಣಾಮ ದೇವರಾಜ ಮಾರ್ಕೆಟ್, ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲಿ ಸವಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…