ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ನಗರದಾದ್ಯಂತ ಮನೆಗಳು, ದೇವಸ್ಥಾನಗಳಲ್ಲಿ ಬೇವು-ಬೆಲ್ಲದ ತಯಾರಿಕೆ, ವಿಶೇಷ ಪೂಜೆಗಳಿಗೆ ಭರದ ಸಿದ್ಧತೆಗಳು ನಡೆದಿವೆ.
ಅರಮನೆ ಆವರಣದಲ್ಲಿ ಮಾರ್ಚ್ 19 ರಿಂದ 2-3 ದಿನಗಳ ಕಾಲ ‘ಯುಗಾದಿ ಸಂಗೀತೋತ್ಸವ’ ಆಯೋಜಿಸಲಾಗಿದೆ.
ದೇವರಾಜ ಮಾರುಕಟ್ಟೆ ಸೇರಿ ವಿವಿಧೆಡೆ ಯುಗಾದಿ ಹಬ್ಬದ ವ್ಯಾಪಾರ ಭರ್ಜರಿಯಾಗಿ ನಡೆಯುತ್ತಿದೆ. ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದ್ದು, ಮಾವು-ಬೇವಿನ ಸೊಪ್ಪು, ಹೂ, ಹಣ್ಣು ಸೇರಿದಂತೆ ಹಬ್ಬದ ಪರಿಕರಗಳ ಖರೀದಿ ಭರಾಟೆ ಜೋರಾಗಿದೆ. ಇನ್ನ ಅಗತ್ಯ ವಸ್ತುಗಳ ಬೆಲೆ ಏರಿಕೆಯ ನಡುವೆಯೂ ವಸ್ತುಗಳ ಖರೀದಿಗೆ ಮೈಸೂರಿಗರು ಮುಗಿಬಿದ್ದಿದ್ದಾರೆ.
ಹೊಸಬಟ್ಟೆ ಖರೀದಿಗೆ ರಷ್…
ಹಿಂದೂ ಸಂಪ್ರದಾಯದ ಪ್ರಕಾರ ಯುಗಾದಿ ಹಬ್ಬವೇ ವರ್ಷದ ಮೊದಲ ಹಬ್ಬ. ಹೀಗಾಗಿ ಹೊಸ ಬಟ್ಟೆ ಖರೀದಿಗೆ ಜನರು ಮುಗಿಬಿದ್ರು. ಮಹಿಳೆಯರು ಸೀರೆ, ಬಳೆ, ಚೂಡಿದಾರ್, ಲೆಹಂಗಾ ಖರೀದಿಸಿದ್ರೆ, ಪುರುಷರು ಜೀನ್ಸ್ ಪ್ಯಾಂಟ್, ಪಂಚೆ, ಶರ್ಟ್ ಗಳನ್ನ ಕೊಂಡುಕೊಂಡರು. ಜನರ ದಟ್ಟಣೆ ಹೆಚ್ಚಾದ ಪರಿಣಾಮ ದೇವರಾಜ ಮಾರ್ಕೆಟ್, ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲಿ ಸವಾರರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…