ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು.
ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ ದೇವಾಲಯದ ಮುಂಭಾಗದಲ್ಲಿರುವ ಕೊಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವರ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ, ಈ ಬಾರಿಗೆ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಗಂಗೆಯನ್ನು ಕೊಳದಲ್ಲಿ ಹಾಕುವ ಮೂಲಕ ಹೋಕುಳಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಹುಡುಗರು ಹಾಗೂ ಅಲ್ಲಿ ನೆರೆದಿದ್ದ ಸಾರ್ವಜನಿಕರು ಓಕುಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಹೋಕುಳಿ ಉತ್ಸವದಲ್ಲಿ ನೂರಾರು ಮಂದಿ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…