ನಂಜನಗೂಡು: ತಾಲ್ಲೂಕಿನ ಚಿಕ್ಕಯ್ಯನ ಛತ್ರ ಗ್ರಾಮದ ಪ್ರಸನ್ನ ನಂಜುಂಡೇಶ್ವರ ದೇವಾಲಯಲ್ಲಿ ಯುಗಾದಿ ಹೋಕುಳಿ ಉತ್ಸವ ಅದ್ಧೂರಿಯಾಗಿ ನೆರವೇರಿತು.
ಮೊದಲಿಗೆ ಕಪಿಲಾ ನದಿಯಲ್ಲಿ ಗಂಗಾ ಪೂಜೆ ಸಲ್ಲಿಸಿ, ವಾದ್ಯಗೋಷ್ಠಿ ಮೂಲಕ ಹೆಣ್ಣು ಮಕ್ಕಳು ತಲೆ ಮೇಲೆ ಕಳಸ ಹೊತ್ತು ತಂದರು. ಪ್ರಸನ್ನ ನಂಜುಂಡೇಶ್ವರ ದೇವಾಲಯದ ಮುಂಭಾಗದಲ್ಲಿರುವ ಕೊಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ದೇವರ ಉತ್ಸವ ಮೂರ್ತಿಯನ್ನು ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಿ, ಈ ಬಾರಿಗೆ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಲಾಯಿತು.
ನಂತರ ಗಂಗೆಯನ್ನು ಕೊಳದಲ್ಲಿ ಹಾಕುವ ಮೂಲಕ ಹೋಕುಳಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಈ ವೇಳೆ ಹುಡುಗರು ಹಾಗೂ ಅಲ್ಲಿ ನೆರೆದಿದ್ದ ಸಾರ್ವಜನಿಕರು ಓಕುಳಿಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಹೋಕುಳಿ ಉತ್ಸವದಲ್ಲಿ ನೂರಾರು ಮಂದಿ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…
ಹೊಸದಿಲ್ಲಿ: ಮುಂಬರುವ ಐಸಿಸಿ ಟಿ-೨೦ ವಿಶ್ವಕಪ್ಗಾಗಿ ೧೫ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದು, ಶುಭಮನ್…
ಹೊಸದಿಲ್ಲಿ : ಮೊಟ್ಟೆ ಸೇವೆನೆಗೆ ಸುರಕ್ಷಿತವಾಗಿದ್ದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕವಾಗುವ ಯಾವುದೇ ಅಂಶ ಪತ್ತೆ ಆಗಿಲ್ಲ ಎಂದು ಕೇಂದ್ರ ಆಹಾರ…
ಚಾಮರಾಜನಗರ : ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವಂತಹ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳುವಂತೆ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಲಶಕ್ತಿ ಮಂತ್ರಾಲಯದ…
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…