ಮೈಸೂರು : ವಿದ್ಯಾರ್ಥಿನಿಯೊಬ್ಬಳು ಹೊಟ್ಟೆ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದಲ್ಲಿ ನಡೆದಿದೆ. ಮಹದೇವು ಎಂಬುವವರ ಪುತ್ರಿ ರೇಣುಕಾ(17) ಸಾವನ್ನಪ್ಪಿರುವ ದರ್ದೈವಿ.
ರೇಣುಕಾ ನಂಜನಗೂಡು ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ಪೋಷಕರು ದೂರು ಸಲ್ಲಿಸಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…