ಮೈಸೂರು

ಸಂವಿಧಾನದಲ್ಲಿ ರಾಜ-ರಾಣಿ ಪಟ್ಟಕ್ಕೆ ಹೆಚ್ಚು ಮಹತ್ವ ಇಲ್ಲ: ಯದುವೀರ್‌

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಗ್ಗೆ ನಿನ್ನೆ (ಮಾ.೧೮) ರಂದು ಯಾರು ರಾಜ..? ಎಂದು ಪ್ರಶ್ನಿಸಿದ್ದರು. ಈ ಕುರಿತು ಸ್ವತಃ ಪ್ರತಿಕ್ರಿಯಿಸಿರುವ ರಾಜವಂಶಸ್ಥ ಯದುವೀರ್ ಅವರು, ರಾಜ ಯಾರು ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯೆ ಕೊಡಲಿ ಎಂದು ಯದುವೀರ್‌ ಮರು ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿಂದು ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಬಳಿಕ ಯದುವೀರ್ ಮಾತನಾಡಿದರು. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ-ರಾಣಿ ಎಂಬ ಯಾವುದು ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದು ಜಾಣ್ಮೆಯ ಉತ್ತರ ನೀಡಿದ್ದಾರೆ.

ಸುತ್ತೂರು ಸ್ವಾಮೀಜಿಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆ ಚರ್ಚೆ ಮಾಡಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ದಿನಾಂಕ ಇನ್ನೂ ಎರಡು ಮೂರು ದಿನಗಳಲ್ಲಿ ತೀರ್ಮಾನವಾಗುತ್ತದೆ‌. ಮೋದಿ ಪ್ರಚಾರಕ್ಕೆ ಬರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

7 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

7 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

7 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

7 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

7 hours ago