job fair
ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗಿಯಾಗಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ಮಾಜಿ ಸಂಸದ ಆರ್. ಧ್ರುವನಾರಾಯಣರ ಹೆಸರಲ್ಲಿ ಅವರ ಅಭಿಮಾನಿ ಬಳಗ ಇದೇ ಜುಲೈ 31 ರ ಗುರುವಾರ ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳದ ಸಿದ್ಧತೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.
ಶಿಕ್ಷಣ ಹಾಗೂ ಆರೋಗ್ಯ ತಮ್ಮ ತಂದೆ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರ ಕನಸಾಗಿತ್ತು. ಅದನ್ನು ನನಸು ಮಾಡಲೆಂದೇ ಅವರ ಜನ್ಮ ದಿನೋತ್ಸವದ ಅಂಗವಾಗಿ ಅವರ ಅಭಿಮಾನಿಗಳು ನಗರದ ಪದವಿ ಕಾಲೇಜಿನ ಆವರಣದಲ್ಲೇ ಈ ಬಾರಿ ಉದ್ಯೋಗ ಮೇಳ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡಿದ್ದಾರೆ. ಈ ಮೇಳದಲ್ಲಿ ನೂರಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗಿಯಾಗಲಿದ್ದು ತಮಗೆ ಬೇಕಾದ ಉದ್ಯೋಗಿಗಳನ್ನು ಅವರುಗಳು ಸ್ಥಳದಲ್ಲೇ ಆಯ್ಕೆ ಮಾಡಿಕೊಳ್ಳಲಿದ್ದಾರೆ. ನಿರುದ್ಯೋಗಿಗಳ ಪಾಲಿಗೆ ಇದು ವರದಾನವಾಗಿದೆ ಎಂದರು.
ತಾಲ್ಲೂಕು ಹಾಗೂ ಜಿಲ್ಲೆಯ ನಿರುದ್ಯೋಗಿಗಳು ಈ ಮೇಳದಲ್ಲಿ ಭಾಗಿಯಾಗಿ ಉದ್ಯೋಗ ಪಡೆದುಕೊಂಡರೆ ತಂದೆ ಧ್ರುವ ಅವರ ಆಶಯ ಈಡೇರಿದಂತಾಗುತ್ತದೆ. ಅದಕ್ಕಾಗಿಯೇ ಈ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗಾಗಿ ಸಂದರ್ಶನದ ಕುರಿತಾದ ತರಬೇತಿಯನ್ನೂ ಈಗಾಗಲೇ ನೀಡಲಾಗಿದೆ ಎಂದರು.
ಈ ಮೆಳದಲ್ಲಿ 1,000ಕ್ಕೂ ಹೆಚ್ಚು ಜನರಿಗೆ ಖಾಯಂ ಉದ್ಯೋಗ ನಿರೀಕ್ಷಿಸಲಾಗಿದೆ. ಅದೇ ರೀತಿ ಉಚಿತ ಆರೋಗ್ಯ ತಪಾಸಣಾ ಶಿಬಿರವೂ ಸದುಪಯೋಗವೇಬೇಕಿದೆ ಎಂದು ಹೇಳಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧಕ್ಷ ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ, ನಗರಸಭೆ ಅಧ್ಯಕ್ಷ ಮಾರುತಿ, ತಾಲ್ಲೂಕಿನ ಉಸ್ತುವಾರಿ ಹಿರೇಹಳ್ಳಿ ಸೋಮೇಶ, ನಗರಸಭಾ ಅಧ್ಯಕ್ಷ ಶ್ರೀಕಂಠ, ಸದಸ್ಯರಾದ ಪ್ರದೀಪ, ಗಾಯತ್ರಿ ಮೋಹನ್, ಎಸ್.ಪಿ.ಮಹೇಶ, ಯೋಗೀಶ, ಗಂಗಾಧರ್, ರವಿ, ದೊರೆಸ್ವಾಮಿ ನಾಯಕ, ಕಮಲೇಶ ಮತ್ತಿತರರು ಹಾಜರಿದ್ದರು.
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್ನಲ್ಲಿ ಮೂಡಿಬಂದಿರುವ…