ಮೈಸೂರು

ನಿರುದ್ಯೋಗಿಗಳೇ ಉದ್ಯೋಗಮೇಳದಲ್ಲಿ ಭಾಗಿಯಾಗಿ : ಶಾಸಕ ದರ್ಶನ್‌ ಧ್ರುವನಾರಾಯಣ್‌ ಕರೆ

ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗಿಯಾಗಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ಮಾಜಿ ಸಂಸದ ಆರ್. ಧ್ರುವನಾರಾಯಣರ ಹೆಸರಲ್ಲಿ ಅವರ ಅಭಿಮಾನಿ ಬಳಗ ಇದೇ ಜುಲೈ 31 ರ ಗುರುವಾರ ನಗರದ ಸರ್ಕಾರಿ ಪದವಿ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ಉದ್ಯೋಗ ಮೇಳದ ಸಿದ್ಧತೆಯನ್ನು ಪರಿಶೀಲಿಸಿ ಅವರು ಮಾತನಾಡಿದರು.

ಶಿಕ್ಷಣ ಹಾಗೂ ಆರೋಗ್ಯ ತಮ್ಮ ತಂದೆ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರ ಕನಸಾಗಿತ್ತು. ಅದನ್ನು ನನಸು ಮಾಡಲೆಂದೇ ಅವರ ಜನ್ಮ ದಿನೋತ್ಸವದ ಅಂಗವಾಗಿ ಅವರ ಅಭಿಮಾನಿಗಳು ನಗರದ ಪದವಿ ಕಾಲೇಜಿನ ಆವರಣದಲ್ಲೇ ಈ ಬಾರಿ ಉದ್ಯೋಗ ಮೇಳ ಹಾಗೂ ಉಚಿತ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡಿದ್ದಾರೆ. ಈ ಮೇಳದಲ್ಲಿ ನೂರಕ್ಕೂ ಹೆಚ್ಚು ವಿವಿಧ ಕಂಪೆನಿಗಳು ಭಾಗಿಯಾಗಲಿದ್ದು ತಮಗೆ ಬೇಕಾದ ಉದ್ಯೋಗಿಗಳನ್ನು ಅವರುಗಳು ಸ್ಥಳದಲ್ಲೇ ಆಯ್ಕೆ ಮಾಡಿಕೊಳ್ಳಲಿದ್ದಾರೆ. ನಿರುದ್ಯೋಗಿಗಳ ಪಾಲಿಗೆ ಇದು ವರದಾನವಾಗಿದೆ ಎಂದರು.

ತಾಲ್ಲೂಕು ಹಾಗೂ ಜಿಲ್ಲೆಯ ನಿರುದ್ಯೋಗಿಗಳು ಈ ಮೇಳದಲ್ಲಿ ಭಾಗಿಯಾಗಿ ಉದ್ಯೋಗ ಪಡೆದುಕೊಂಡರೆ ತಂದೆ ಧ್ರುವ ಅವರ ಆಶಯ ಈಡೇರಿದಂತಾಗುತ್ತದೆ. ಅದಕ್ಕಾಗಿಯೇ ಈ ಕಾಲೇಜಿನ ಪದವಿ ವಿದ್ಯಾರ್ಥಿಗಳಿಗಾಗಿ ಸಂದರ್ಶನದ ಕುರಿತಾದ ತರಬೇತಿಯನ್ನೂ ಈಗಾಗಲೇ ನೀಡಲಾಗಿದೆ ಎಂದರು.

ಈ ಮೆಳದಲ್ಲಿ 1,000ಕ್ಕೂ ಹೆಚ್ಚು ಜನರಿಗೆ ಖಾಯಂ ಉದ್ಯೋಗ ನಿರೀಕ್ಷಿಸಲಾಗಿದೆ. ಅದೇ ರೀತಿ ಉಚಿತ ಆರೋಗ್ಯ ತಪಾಸಣಾ ಶಿಬಿರವೂ ಸದುಪಯೋಗವೇಬೇಕಿದೆ ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧಕ್ಷ ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುರಹಟ್ಟಿ ಮಹೇಶ, ನಗರಸಭೆ ಅಧ್ಯಕ್ಷ ಮಾರುತಿ, ತಾಲ್ಲೂಕಿನ ಉಸ್ತುವಾರಿ ಹಿರೇಹಳ್ಳಿ ಸೋಮೇಶ, ನಗರಸಭಾ ಅಧ್ಯಕ್ಷ ಶ್ರೀಕಂಠ, ಸದಸ್ಯರಾದ ಪ್ರದೀಪ, ಗಾಯತ್ರಿ ಮೋಹನ್, ಎಸ್.ಪಿ.ಮಹೇಶ, ಯೋಗೀಶ, ಗಂಗಾಧರ್, ರವಿ, ದೊರೆಸ್ವಾಮಿ ನಾಯಕ, ಕಮಲೇಶ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

7 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

7 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

8 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

9 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

9 hours ago