ಮೈಸೂರು

ಮಹಿಳೆಯರು ಮಾದಕ ವ್ಯಸನಕ್ಕೆ ದಾಸವಾಗುತ್ತಿರುವುದು ಶೋಚನೀಯ: ಪಿ.ಸಿ ಕುಮಾರಸ್ವಾಮಿ

ಮೈಸೂರು: ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ಗೀಳಾಗಿ ಪರಿಣಮಿಸುವ ಮಾದಕ ವಸ್ತುಗಳ ಸೇವನೆಯು ಭಾರತದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರೇ ಹೆಚ್ಚು ಮಾದಕ ವ್ಯಸನಿಗಳಾಗುತ್ತಿರುವುದು ಶೋಚನೀಯ ಸಂಗತಿ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳಾದ ಡಾ. ಪಿ.ಸಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

ಶನಿವಾರ(ಜು.7) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಮೈಸೂರು ಇವರ ಸಹಯೋಗದೊಂದಿಗೆ ಎನ್.ಆರ್. ಮೊಹಲ್ಲಾದ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ” ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಾದಕ ವಸ್ತುಗಳ ಸೇವನೆ ಇಂದು ಸಾಮಾಜಿಕ ಪಿಡುಗಾಗಿ ಬೆಳೆಯುತ್ತಿದೆ. ಇದರಿಂದ ಚಟಕ್ಕೆ ದಾಸನಾಗಿರುವ ವ್ಯಕ್ತಿಗೆ ವೈಯಕ್ತಿಕವಾಗಿ ಮತ್ತು ಕುಟುಂಬದ ಮೇಲೆ ಹಾಗೂ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸರ್ವೇಗಳನ್ನು ಗಮನಿಸುವುದಾದರೆ 16-17 ವರ್ಷದ ಹದಿಹರೆಯದ ಹುಡುಗ ಮತ್ತು ಹುಡುಗಿಯರು ಹೆಚ್ಚಾಗಿ ಮಾದಕ ವಸ್ತುಗಳ ಚಟಕ್ಕೆ ಒಳಗಾಗಿರುವುದು ಕಂಡುಬರುತ್ತದೆ. ಇದು ಆ ಮಕ್ಕಳ ಭವಿಷ್ಯಕ್ಕೆ ಮಾರಕ ಎಂದು ಎಚ್ಚರಿಸಿದರು.

ಜನರು ಯಾವುದೂ ಒಂದು ಸಣ್ಣ ಕಾರಣಕ್ಕಾಗಿ ಮಾದಕ ವಸ್ತುಗಳನ್ನು ಸೇವಿಸಲು ಶುರುಮಾಡಿ ನಂತರ ಅದಕ್ಕೆ ದಾಸರಾಗುತ್ತಾರೆ. ಮುಂದೆ ಹವ್ಯಾಸ ಬಿಡಬೇಕೆಂದರೂ ಅದು ಕಷ್ಟಸಾಧ್ಯ ಮತ್ತು ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಹೆಚ್ಚಾಗಿರುತ್ತದೆ. ಹಾಗಾಗಿ ವಿದ್ಯಾರ್ಥಿಗಳು ಯುವ ಪೀಳಿಗೆಯ ಜನರು ಜೀವಕ್ಕೆ ಮಾರಕವಾಗುವ ಹವ್ಯಾಸವನ್ನೇ ಬಿಡಬೇಕು ಎಂದು ಸಲಹೆ ನೀಡಿದರು.

ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವತಿಯಿಂದ ಜನರಿಗೆ ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು. ಸುತ್ತ ಮುತ್ತಲಿನ ಜನರಿಗೂ ಇದರ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಪ್ರತಿನಿತ್ಯ ಹಲವಾರು ಮಾಧ್ಯಮಗಳಲ್ಲಿ ಬಹಳಷ್ಟು ವಿಷಯಗಳನ್ನು ನೋಡುತ್ತೇವೆ. ನಾಗರಿಕ ಸಮಾಜದಲ್ಲಿನ ಕಟ್ಟುಪಾಡುಗಳನ್ನು ಮೀರಿ ಇತ್ತೀಚಿನ ದಿನಗಳಲ್ಲಿ ನಾಗರೀಕರು ವರ್ತಿಸುತ್ತಿದ್ದಾರೆ. ಇದಕ್ಕೆ ಕಾರಣ ಆಲ್ಕೋಹಾಲ್, ಗುಟ್ಕಾ, ತಂಬಾಕು ಇನ್ನಿತರ ಮಾದಕ ವಸ್ತುಗಳ ಸೇವನೆಗೆ ದಾಸರಾಗಿರುವುದು ಎಂದರು.

ಪ್ರತಿಯೊಬ್ಬರೂ ಇದರ ಬಗ್ಗೆ ಎಚ್ಚೆತ್ತುಕೊಂಡು ಆರೋಗ್ಯದ ಬಗ್ಗೆ ಮಾಹಿತಿ ತಿಳಿದುಕೊಂಡು ಅದರ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳಲ್ಲಿ ನೀಡಿರುವ ಮಾಹಿತಿಯನ್ನು ಅಳವಡಿಸಿಕೊಂಡು ನಿಮ್ಮ ಹಂತದಲ್ಲಿಯೇ ನಿಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಮಾದಕ ವಸ್ತುಗಳ ವ್ಯಸನಗಳಿಗೆ ಇದರ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅವರಲ್ಲಿ ಜಾಗೃತಿ ಮೂಡಿಸುವ ಮೂಲಕ ಧನಾತ್ಮಕವಾಗಿ ಆರೋಗ್ಯವಂತ ಸಮಾಜದ ನಿರ್ಮಾಣದಲ್ಲಿ ಮಾದಕ ವಸ್ತುಗಳ ಸೇವನೆಯ ಬಳಕೆಯನ್ನು ನಿರ್ಮೂಲನೆ ಮಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಬೃಂದಾ, ಸಿ.ಪಿ.ಸಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್, ಮನೋರೋಗ ತಜ್ಞೆ ಡಾ.ಮಾಲಿನಿ, ಲಷ್ಕರ್ ಮೊಹಲ್ಲಾದ ಪೋಲಿಸ್ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್, ಎನ್‌ಎಸ್‌ಎಸ್‌ನ ಸಂಚಾಲಕರು, ಅಧ್ಯಾಪಕ ವೃಂದದವರು ಹಾಗೂ ವಿಧ್ಯಾರ್ಥಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

7 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

8 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

9 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

10 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

10 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

12 hours ago