ಮೈಸೂರು

ಕೇಂದ್ರ ಬಜೆಟ್‌ 2025| ದೇಶದ ಮೇಲಿನ ಸಾಲವನ್ನು ಏರಿಕೆ ಮಾಡಿದ್ದೇ ಸಾಧನೆ: ಎಂ.ಲಕ್ಷ್ಮಣ್‌

ಮೈಸೂರು: ದೇಶದ ಪ್ರತಿ ವ್ಯಕ್ತಿಯ ಮೇಲೆ 3.5 ಲಕ್ಷ ರೂ. ಸಾಲ ಹೇರಿ, ದೇಶದ ಮೇಲಿನ ಸಾಲವನ್ನು 205 ದಶಲಕ್ಷ ಕೋಟಿ ರೂ.ಗೆ ಏರಿಕೆ ಮಾಡಿರುವುದೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವ್ಯಂಗ್ಯವಾಡಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದು(ಫೆಬ್ರವರಿ.2) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಖಾಲಿ ಚೆಂಬು, ತೆಂಗಿನಚಿಪ್ಪು ಪ್ರದರ್ಶಿಸುವ ಮೂಲಕ ಕೇಂದ್ರ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿದ ಅವರು, 2025-26ನೇ ಸಾಲಿನ ಕೇಂದ್ರ ಬಜೆಟ್ ನಿರಾಶದಾಯಕ ಮತ್ತು ಭಾರತವನ್ನು ಸಾಲದ ಸುಳಿಗೆ ನೂಕಿದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಾ. ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಇದ್ದಾಗ ಬಜೆಟ್ ಗಾತ್ರ 14 ಲಕ್ಷ ಕೋಟಿ ರೂ. ಇತ್ತು. ಆದರೆ ಈ ಬಾರಿಯ ಬಜೆಟ್ ಗಾತ್ರ 50 ಲಕ್ಷ ಕೋಟಿ ರೂ. ಆಗಿದೆ. ಈ ಬಜೆಟ್‌ ಮಂಡಿಸಲು 16 ಲಕ್ಷ ಕೋಟಿ ರೂ. ಸಾಲ ತೆಗೆದುಕೊಂಡಿದ್ದಾರೆ. 1947 ರಿಂದ 2014ರ ಅವಧಿಯಲ್ಲಿ ಮಾಡಿದ್ದ ಸಾಲ 53 ಲಕ್ಷ ಕೋಟಿ ರೂ. ಮಾತ್ರ. ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕೇವಲ 10 ವರ್ಷಗಳಲ್ಲಿ 205 ದಶಲಕ್ಷ ಕೋಟಿ ರೂ. ಆಗಿದೆ. ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುವ ಬದಲಿಗೆ ಸಾಲದ ಕೂಪಕ್ಕೆ ತಳ್ಳಿರುವಂತಹ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ಕಿಡಿಕಾರಿದರು.

ಇನ್ನೂ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಬಿಹಾರಕ್ಕಾಗಿ 78 ಸಾವಿರ ಕೋಟಿ ರೂ. ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಎಲ್ಲೆಲ್ಲಿ ಚುನಾವಣೆ ಬರುತ್ತಾ ಇದೆ ಅಲ್ಲಿ ವಿಶೇಷ ಪ್ಯಾಕೇಜ್ ಕೊಟ್ಟು ಮತದಾರರ ಓಲೈಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಕೇಂದ್ರ ಬಜೆಟ್‌ ರಾಜ್ಯಕ್ಕೆ ಶೂನ್ಯ ನೀಡಿದೆ

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದು, ಯಾವುದೇ ಹೊಸ ಯೋಜನೆಗಳನ್ನು ನೀಡಿಲ್ಲ. ಜಿಎಸ್‌ಟಿ ಹಣದಲ್ಲೂ ಅನ್ಯಾಯ ಮಾಡಿದೆ. ನರೇಗಾ ಯೋಜನೆಯಲ್ಲೂ ಅನುದಾನ ಕಡಿಮೆ ಮಾಡಿದ್ದಾರೆ. ಕೃಷಿ ಕ್ಷೇತ್ರದ ಅನುದಾನದಲ್ಲೂ ಗಣನೀಯ ಇಳಿಕೆ ಆಗಿದೆ. ಮೇಕ್ ಇಂಡಿಯಾ, ಸ್ಟ್ಯಾಂಡ್ ಅಪ್ ಇಂಡಿಯಾ ಅನುಷ್ಠಾನಕ್ಕೆ ಕೇವಲ 100 ಕೋಟಿ ರೂ.ನೀಡಿದ್ದಾರೆ. ಅಲ್ಲದೇ ಕಾರ್ಪೊರೇಟ್ ಕಂಪೆನಿಗಳ ತೆರಿಗೆ ಕಡಿಮೆ ಮಾಡುವ ಮೂಲಕ ಕ್ರೂರಿ ಕ್ಯಾಪಿಟಲಿಸ್ಟ್ ಓಲೈಸಲಾಗಿದೆ. ನಮ್ಮ ರಾಜ್ಯಕ್ಕೆ ಖಾಲಿ ಚೆಂಬು, ತೆಂಗಿನ ಕಾಯಿ ಚಿಪ್ಪು ಮತ್ತು ಮೂರು ನಾಮ ಹಾಕಿದ್ದಾರೆ ವಾಗ್ದಾಳಿ ನಡೆಸಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ, ಕುಮಾರಸ್ವಾಮಿ ಅವರು ಕರ್ನಾಟಕಕ್ಕೆ ಒಂದೇ ಒಂದು ಯೋಜನೆ ತರಲು ಸಾಧ್ಯವಾಗಿಲ್ಲ. ನಮ್ಮ ಸಂಸದರು ಹಾಗೂ ಸಚಿವರು ತಮಿಳುನಾಡಿನವರನ್ನು ನೋಡಿ ಕಲಿಯಬೇಕು. ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಒಂದಾಗುತ್ತಾರೆ. ನಮ್ಮಲ್ಲಿ ದಿನಬೆಳಗಾದರೆ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸುತ್ತಾ ಕಾಲಹರಣ ಮಾಡುತ್ತಾರೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago