ಮೈಸೂರು

ವಿಶ್ವವಿದ್ಯಾನಿಲಯಗಳು ಪರಿವರ್ತನೆಯೆ ಕೇಂದ್ರಗಳಾಗಬೇಕು : ಸಚಿವ ಮಹದೇವಪ್ಪ

ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವಿಶ್ವ ಜ್ಞಾನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕದಲ್ಲಿ ಅಂಬೇಡ್ಕರ್ ಹೆಜ್ಜೆ ಗುರುತುಗಳು ಸಾಕ್ಷ್ಯ ಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ವಿಶ್ವ ವಿದ್ಯಾನಿಲಯಗಳು ಸಮ ಸಮಾಜದ ನಿರ್ಮಾಣ ಮಾಡುವ ಜ್ಞಾನ ಕಣಜಗಳಾಗಿ ಬೆಳೆಯಬೇಕು. ಮೈಸೂರು ವಿಶ್ವ ವಿದ್ಯಾಲಯ ವಿಶ್ವದ ಶ್ರೇಷ್ಠ ವಿಶ್ವ ವಿದ್ಯಾಲಯಗಳಲ್ಲಿ ಒಂದಾಗಿದೆ. ಇದರಲ್ಲಿ ದೇಶದ ಮೊದಲ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್, ರಾಷ್ಟ್ರಕವಿ ಕುವೆಂಪು ಸೇರಿದಂತೆ ಅನೇಕ ಸಾಧಕರು ಕೂಡ ಅಧ್ಯಯನ ಮಾಡಿದ್ದಾರೆ. ಇವೆಲ್ಲರೂ ತಮ್ಮ ಜ್ಞಾನವನ್ನು ಪಸರಿಸಿದವರು ಎಂದು ತಿಳಿಸಿದರು.

ಇದನ್ನು ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ

ವಿಶ್ವ ವಿದ್ಯಾನಿಲಯ ಚಿಂತನೆಗಳ ಚಿಲುಮೆ. ಕುವೆಂಪು ಅವರು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿಯಾಗಿದ್ದ ಕಾಲದ ಸಂಧರ್ಭದಲ್ಲಿ ವಿಶ್ವ ವಿದ್ಯಾಲಯಕ್ಕೆ ಅನೇಕ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಿದರು. ವಿವಿಗಳು ಸಂಶೋಧನೆಗೆ ಗಮನಹರಿಸುವ ಜತೆಗೆ,ಚಿಂತನೆಗಳ ತಾಣವಾಗಬೇಕು. ಸಮಾಜದಲ್ಲಿ ನಡೆಯುತ್ತಿರುವ ಹಲವಾರು ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿ ಜನರ ಮುಂದಿಡಬೇಕು ಎಂದರು.

ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಸಂಶೋಧನಾ ಕೇಂದ್ರವು ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ನಂತರ ಈ ಹಂತಕ್ಕೆ ಬೆಳೆದು ನಿಂತಿದೆ. ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಸಚಿವರು ಇದರ ಬೆಳವಣಿಗೆಗೆ ಅಪಾರ ಅನುದಾನವನ್ನು ನೀಡಿ ಪ್ರೋತ್ಸಾಹಿಸಿರುವುದರಿಂದ ವಿವಿ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. ಅಂಬೇಡ್ಕರ್ ಅವರ ಚಿಂತನೆಗಳನ್ನು ವಿಶ್ವ ಮಟ್ಟದಲ್ಲಿ ತಿಳಿಸಲು ನಾವು ಕಟಿಬದ್ಧವಾಗಿ ಕಾರ್ಯ ನಿರ್ವಹಿಸುತ್ತೇವೆ. ಮುಂದಿನ ದಿನಗಳಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ನಡೆಸಲುಬೇಕಾದ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ: ನಮ್ಮ ವಿಶ್ವವಿದ್ಯಾಲಯಗಳ ಭ್ರಷ್ಟಾಚಾರದ ಆಳ ಮತ್ತು ಮೂಲ ಎಲ್ಲಿ?

ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಡಾ. ಜೆ. ಸೋಮಶೇಖರ್ ಮಾತನಾಡಿ, ೧೯೯೪ ರಲ್ಲಿ ಮೈಸೂರು ವಿಶ್ವ ವಿದ್ಯಾಲಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಪೀಠ ಸ್ಥಾಪನೆ ಆಯಿತು. ನಂತರ ೨೦೦೦ ನೇ ಇಸವಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ವಾಗಿ ನಡೆದುಕೊಂಡು ಬರುತ್ತಿದೆ. ಈ ಕೇಂದ್ರದಲ್ಲಿ ಅಂಬೇಡ್ಕರ್ ಅವರು ಗಳಿಸಿದ ಜ್ಞಾನವನ್ನು ವಿಶ್ವ ಮಟ್ಟದಲ್ಲಿ ಸಾರುವ ಕಾರ್ಯವನ್ನು ಮಾಡುತ್ತಿದೆ. ದಿವಂಗತ ಮಾಜಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಈ ಕೇಂದ್ರವನ್ನು ಸ್ಥಾಪನೆ ಮಾಡಿದರು. ಸಿದ್ದರಾಮಯ್ಯ ಅವರು ಮೊದಲು ಮುಖ್ಯಮಂತ್ರಿಗಳಾದ ೫೦ ಲಕ್ಷ ರೂ.ನೀಡಿದ್ದರು. ಅನಂತರ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ೩ ಕೋಟಿ ನೀಡಿದ್ದರು. ಈಗ ಸಂವಿಧಾನ ಅಧ್ಯಯನ ಪೀಠಕ್ಕೆ ೧೦ ಕೋಟಿ ಅನುದಾನ ನೀಡಿದ್ದಾರೆ. ಜ್ಞಾನ ದರ್ಶನ ಕೇಂದ್ರದಲ್ಲಿ ಅಂಬೇಡ್ಕರ್ ಮ್ಯೂಸಿಯಂ, ಕಂಪ್ಯೂಟರ್ ತರಬೇತಿ ಕೇಂದ್ರ, ದಲಿತ ಡಾಕ್ಯುಮೆಂಟ್ ಸೆಂಟರ್ ನ್ನು ಸ್ಥಾಪಿಸಲಾಗಿದೆ. ಕೇಂದ್ರವನ್ನು ಇನ್ನೂ ಅಭಿವೃದ್ಧಿ ಪಡಿಸಲು ೧೫ ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವ ಎಂ.ಕೆ. ಸವಿತಾ, ಭಾಗ್ಯಲಕ್ಷ್ಮೀ ವಿ.ಶ್ರೀನಿವಾಸಪ್ರಸಾದ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

10 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

10 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

10 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

11 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

11 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

11 hours ago