ಮೈಸೂರು

ವಿಶ್ವವಿದ್ಯಾನಿಲಯಗಳು ಪರಿವರ್ತನೆಯೆ ಕೇಂದ್ರಗಳಾಗಬೇಕು : ಸಚಿವ ಮಹದೇವಪ್ಪ

ಮೈಸೂರು : ವಿಶ್ವವಿದ್ಯಾನಿಲಯಗಳು ಯುವಜನರಲ್ಲಿ ತಾಂಡವವಾಡುತ್ತಿರುವ ಜಾತೀಯತೆ ತೊಲಗಿಸುವ ಪರಿವರ್ತನೆಯ ಕೇಂದ್ರಗಳಾಗಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಮಾನಸ ಗಂಗೋತ್ರಿಯ ಡಾ. ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ವಿಶ್ವ ಜ್ಞಾನಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕರ್ನಾಟಕದಲ್ಲಿ ಅಂಬೇಡ್ಕರ್ ಹೆಜ್ಜೆ ಗುರುತುಗಳು ಸಾಕ್ಷ್ಯ ಚಿತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ವಿಶ್ವ ವಿದ್ಯಾನಿಲಯಗಳು ಸಮ ಸಮಾಜದ ನಿರ್ಮಾಣ ಮಾಡುವ ಜ್ಞಾನ ಕಣಜಗಳಾಗಿ ಬೆಳೆಯಬೇಕು. ಮೈಸೂರು ವಿಶ್ವ ವಿದ್ಯಾಲಯ ವಿಶ್ವದ ಶ್ರೇಷ್ಠ ವಿಶ್ವ ವಿದ್ಯಾಲಯಗಳಲ್ಲಿ ಒಂದಾಗಿದೆ. ಇದರಲ್ಲಿ ದೇಶದ ಮೊದಲ ರಾಷ್ಟ್ರಪತಿ ಸರ್ವಪಲ್ಲಿ ರಾಧಾಕೃಷ್ಣನ್, ರಾಷ್ಟ್ರಕವಿ ಕುವೆಂಪು ಸೇರಿದಂತೆ ಅನೇಕ ಸಾಧಕರು ಕೂಡ ಅಧ್ಯಯನ ಮಾಡಿದ್ದಾರೆ. ಇವೆಲ್ಲರೂ ತಮ್ಮ ಜ್ಞಾನವನ್ನು ಪಸರಿಸಿದವರು ಎಂದು ತಿಳಿಸಿದರು.

ಇದನ್ನು ಓದಿ: ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಸರಿಯಲ್ಲ

ವಿಶ್ವ ವಿದ್ಯಾನಿಲಯ ಚಿಂತನೆಗಳ ಚಿಲುಮೆ. ಕುವೆಂಪು ಅವರು ಮೈಸೂರು ವಿಶ್ವ ವಿದ್ಯಾಲಯದ ಕುಲಪತಿಯಾಗಿದ್ದ ಕಾಲದ ಸಂಧರ್ಭದಲ್ಲಿ ವಿಶ್ವ ವಿದ್ಯಾಲಯಕ್ಕೆ ಅನೇಕ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪನೆ ಮಾಡಿ ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡಿದರು. ವಿವಿಗಳು ಸಂಶೋಧನೆಗೆ ಗಮನಹರಿಸುವ ಜತೆಗೆ,ಚಿಂತನೆಗಳ ತಾಣವಾಗಬೇಕು. ಸಮಾಜದಲ್ಲಿ ನಡೆಯುತ್ತಿರುವ ಹಲವಾರು ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿ ಜನರ ಮುಂದಿಡಬೇಕು ಎಂದರು.

ಮೈಸೂರು ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಸಂಶೋಧನಾ ಕೇಂದ್ರವು ಸಣ್ಣ ಪ್ರಮಾಣದಲ್ಲಿ ಪ್ರಾರಂಭವಾಗಿ ನಂತರ ಈ ಹಂತಕ್ಕೆ ಬೆಳೆದು ನಿಂತಿದೆ. ಮುಖ್ಯಮಂತ್ರಿಗಳು ಹಾಗೂ ಸಮಾಜ ಕಲ್ಯಾಣ ಸಚಿವರು ಇದರ ಬೆಳವಣಿಗೆಗೆ ಅಪಾರ ಅನುದಾನವನ್ನು ನೀಡಿ ಪ್ರೋತ್ಸಾಹಿಸಿರುವುದರಿಂದ ವಿವಿ ಪರವಾಗಿ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. ಅಂಬೇಡ್ಕರ್ ಅವರ ಚಿಂತನೆಗಳನ್ನು ವಿಶ್ವ ಮಟ್ಟದಲ್ಲಿ ತಿಳಿಸಲು ನಾವು ಕಟಿಬದ್ಧವಾಗಿ ಕಾರ್ಯ ನಿರ್ವಹಿಸುತ್ತೇವೆ. ಮುಂದಿನ ದಿನಗಳಲ್ಲಿ ಹಲವಾರು ರಚನಾತ್ಮಕ ಕಾರ್ಯಕ್ರಮಗಳನ್ನು ನಡೆಸಲುಬೇಕಾದ ಪ್ರೋತ್ಸಾಹ ನೀಡಲಾಗುವುದು ಎಂದು ತಿಳಿಸಿದರು.

ಇದನ್ನು ಓದಿ: ನಮ್ಮ ವಿಶ್ವವಿದ್ಯಾಲಯಗಳ ಭ್ರಷ್ಟಾಚಾರದ ಆಳ ಮತ್ತು ಮೂಲ ಎಲ್ಲಿ?

ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ಹಿರಿಯ ಪ್ರಾಧ್ಯಾಪಕ ಡಾ. ಜೆ. ಸೋಮಶೇಖರ್ ಮಾತನಾಡಿ, ೧೯೯೪ ರಲ್ಲಿ ಮೈಸೂರು ವಿಶ್ವ ವಿದ್ಯಾಲಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಪೀಠ ಸ್ಥಾಪನೆ ಆಯಿತು. ನಂತರ ೨೦೦೦ ನೇ ಇಸವಿಯಿಂದ ಡಾ. ಬಿ ಆರ್ ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರ ವಾಗಿ ನಡೆದುಕೊಂಡು ಬರುತ್ತಿದೆ. ಈ ಕೇಂದ್ರದಲ್ಲಿ ಅಂಬೇಡ್ಕರ್ ಅವರು ಗಳಿಸಿದ ಜ್ಞಾನವನ್ನು ವಿಶ್ವ ಮಟ್ಟದಲ್ಲಿ ಸಾರುವ ಕಾರ್ಯವನ್ನು ಮಾಡುತ್ತಿದೆ. ದಿವಂಗತ ಮಾಜಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಅವರು ಈ ಕೇಂದ್ರವನ್ನು ಸ್ಥಾಪನೆ ಮಾಡಿದರು. ಸಿದ್ದರಾಮಯ್ಯ ಅವರು ಮೊದಲು ಮುಖ್ಯಮಂತ್ರಿಗಳಾದ ೫೦ ಲಕ್ಷ ರೂ.ನೀಡಿದ್ದರು. ಅನಂತರ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ ಅವರು ೩ ಕೋಟಿ ನೀಡಿದ್ದರು. ಈಗ ಸಂವಿಧಾನ ಅಧ್ಯಯನ ಪೀಠಕ್ಕೆ ೧೦ ಕೋಟಿ ಅನುದಾನ ನೀಡಿದ್ದಾರೆ. ಜ್ಞಾನ ದರ್ಶನ ಕೇಂದ್ರದಲ್ಲಿ ಅಂಬೇಡ್ಕರ್ ಮ್ಯೂಸಿಯಂ, ಕಂಪ್ಯೂಟರ್ ತರಬೇತಿ ಕೇಂದ್ರ, ದಲಿತ ಡಾಕ್ಯುಮೆಂಟ್ ಸೆಂಟರ್ ನ್ನು ಸ್ಥಾಪಿಸಲಾಗಿದೆ. ಕೇಂದ್ರವನ್ನು ಇನ್ನೂ ಅಭಿವೃದ್ಧಿ ಪಡಿಸಲು ೧೫ ಕೋಟಿ ಅನುದಾನ ನೀಡಬೇಕು ಎಂದು ಮನವಿ ಮಾಡಿದರು.

ಶಾಸಕ ಕೆ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಕೆ. ಶಿವಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಮೈಸೂರು ವಿಶ್ವ ವಿದ್ಯಾನಿಲಯದ ಕುಲಸಚಿವ ಎಂ.ಕೆ. ಸವಿತಾ, ಭಾಗ್ಯಲಕ್ಷ್ಮೀ ವಿ.ಶ್ರೀನಿವಾಸಪ್ರಸಾದ್ ಮತ್ತಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

3 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

3 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

3 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

3 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

3 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

3 hours ago