ಮೈಸೂರು

ಅವೈಜ್ಞಾನಿಕ ಇ-ಖಾತೆ ವ್ಯವಸ್ಥೆಯಿಂದ ಆಸ್ತಿಮಾಲೀಕರಿಗೆ ಪರದಾಟ: ಮಾಜಿ ಮೇಯರ್ ಶಿವಕುಮಾರ್

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಪೂರ್ವ ಪ್ರಯೋಗ ಸಾಧಕ, ಬಾಧಕಗಳನ್ನು ಪರೀಕ್ಷೆಗೆ ಒಳಪಡಿಸದೇ ಅವೈಜ್ಞಾನಿಕವಾಗಿ ರಾಜ್ಯಾದ್ಯಂತ ಎಲ್ಲಾ ಆಸ್ತಿಗಳಿಗೆ ಇ-ಖಾತಾ ಕಡ್ಡಾಯವಾಗಬೇಕೆಂದು ಆದೇಶ ಮಾಡಿದೆ.

ಆದರೆ ಅದಕ್ಕಾಗಿ ಸದ್ಯ ಬಳಸುತ್ತಿರುವ ತಂತ್ರಾಂಶ ಅಸಪರ್ಮಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ- ಖಾತೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದೇ ದಿನಗಟ್ಟಲೆ ಪರದಾಡುವಂತಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದರು.

ಮೈಸೂರು ನಗರದಲ್ಲಿಯೇ ಸುಮಾರು ೨.೫ ಲಕ್ಷ ಆಸ್ತಿಗಳಿವೆ. ಆಸ್ತಿ ಮಾಲೀಕರು ಇ- ಖಾತೆಗಾಗಿ ಅರ್ಜಿ ಸಲ್ಲಿಸಿದರೆ ಪ್ರತಿ ಅರ್ಜಿಯ ಮಾಹಿತಿಯನ್ನು ಹೊಸ ತಂತ್ರಾಂಶಕ್ಕೆ ಅಳವಡಿಸಲು ಮಾಡಲು ಸುಮಾರು ಅರ್ಧ ದಿನ ಹಿಡಿಯುತ್ತಿದೆ. ಜೊತೆಗೆ ಅರ್ಜಿ ಸಲ್ಲಿಸಲೆಂದೇ ವೃದ್ಧರು, ಮಹಿಳೆಯರು ಪಾಲಿಕೆಯ ಎಲ್ಲ ೯ ವಲಯ ಕಚೇರಿಗಳ ಎದುರು ಗಂಟೆಗಟ್ಟಲೆ ಕಾದು ನಿಲ್ಲುವಂತಾಗಿದೆ. ಸಿಎಂ ತವರು ಜಿಲ್ಲೆಯಲ್ಲಿರುವ ನಗರದಲ್ಲಿಯೇ ಈ ಪರಿಸ್ಥಿತಿ ಉಂಟಾಗಿದ್ದರೂ ಸಿಎಂ ಅವರು ಏಕೆ ಗಮನಿಸಿಲ್ಲ ಎಂಬುದು ಬೇಸರದ ಸಂಗತಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಈಗಾಗಲೇ ದೊಡ್ಡ ನಗರಗಳಾದ ಮುಂಬಯಿ, ಜೋಯಿಡಾ, ದೆಹಲಿ ಮೊದಲಾದ ಕಡೆಗಳಲ್ಲಿ ಇ- ಖಾತೆ ನೀಡಿಕೆ ವ್ಯವಸ್ಥೆ ಜಾರಿಯಲ್ಲಿದ್ದು, ಅಲ್ಲೆಲ್ಲಾ ಅತ್ಯಾಧುನಿಕ ತಂತ್ರಾಂಶ ಬಳಸಿರುವ ಕಾರಣ ಇ-ಖಾತೆಯು ಆಸ್ತಿ ಮಾಲೀಕರಿಗೆ ಬೆರಳ ತುದಿಯಲ್ಲೇ ಸಿಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಬಳಸಲಾಗುತ್ತಿರುವ ತಂತ್ರಾಂಶ ತೀರಾ ಹಳೆಯದಾಗಿದೆ. ಇದನ್ನು ರಾಜ್ಯವ್ಯಾಪಿ ಜಾರಿಗೆ ತರುವ ಮುನ್ನ ಯಾವುದಾದರೂ ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಜಾರಿಗೊಳಿಸಿ, ಸಾಧಕ ಬಾಧಕ ಪರಿಶೀಲಿಸಿ, ಲೋಪಗಳನ್ನು ಸರಿಪಡಿಸಿಕೊಂಡ ಬಳಿಕ ರಾಜ್ಯಾದ್ಯಂತ ಜಾರಿಗೊಳಿಸಬೇಕಾಗಿತ್ತು. ಈ ರೀತಿ ಮಾಡದ ಕಾರಣ ಈಗ ಜನತೆ ಸಮಸ್ಯೆ ಎದುರಿಸಬೇಕಾಗಿದೆ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ನಗರಪಾಲಿಕೆ ಮಾಜಿ ಸದಸ್ಯ ಬಿ.ವಿ.ಮಂಜುನಾಥ್ ಅವರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವ್ಯವಸ್ಥೆಯಿಂದ ಇ-ಖಾತೆ ಇಲ್ಲದೆ ಯಾವುದೇ ಆಸ್ತಿ ಕ್ರಯ ನೋಂದಣಿಯಾಗುವುದಿಲ್ಲ. ಹಳೇ ಖಾತೆಯಲ್ಲಿನ ಮಾಹಿತಿಯನ್ನೇ ಇ-ಖಾತೆಗೆ ವರ್ಗಾಯಿಸುವುದಾದರೆ, ಆಸ್ತಿಗಳನ್ನು ಹಳೇ ಖಾತೆಯ ಮಾಹಿತಿಯ ಮೇಲೆ ಕ್ರಯ, ನೋಂದಣಿಗೆ ಅವಕಾಶ ನೀಡಬಹುದಾಗಿದ್ದು, ಸರ್ಕಾರ ಈ ಕುರಿತು ಗಮನಹರಿಸಬೇಕೆಂದು ಆಗ್ರಹಿಸಿದರು.

ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸುಬ್ಬಯ್ಯ, ರೂಪಾ ಯೋಗೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

11 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

1 hour ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago