ಮೈಸೂರು

ಅವೈಜ್ಞಾನಿಕ ಇ-ಖಾತೆ ವ್ಯವಸ್ಥೆಯಿಂದ ಆಸ್ತಿಮಾಲೀಕರಿಗೆ ಪರದಾಟ: ಮಾಜಿ ಮೇಯರ್ ಶಿವಕುಮಾರ್

ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಪೂರ್ವ ಪ್ರಯೋಗ ಸಾಧಕ, ಬಾಧಕಗಳನ್ನು ಪರೀಕ್ಷೆಗೆ ಒಳಪಡಿಸದೇ ಅವೈಜ್ಞಾನಿಕವಾಗಿ ರಾಜ್ಯಾದ್ಯಂತ ಎಲ್ಲಾ ಆಸ್ತಿಗಳಿಗೆ ಇ-ಖಾತಾ ಕಡ್ಡಾಯವಾಗಬೇಕೆಂದು ಆದೇಶ ಮಾಡಿದೆ.

ಆದರೆ ಅದಕ್ಕಾಗಿ ಸದ್ಯ ಬಳಸುತ್ತಿರುವ ತಂತ್ರಾಂಶ ಅಸಪರ್ಮಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ- ಖಾತೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದೇ ದಿನಗಟ್ಟಲೆ ಪರದಾಡುವಂತಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದರು.

ಮೈಸೂರು ನಗರದಲ್ಲಿಯೇ ಸುಮಾರು ೨.೫ ಲಕ್ಷ ಆಸ್ತಿಗಳಿವೆ. ಆಸ್ತಿ ಮಾಲೀಕರು ಇ- ಖಾತೆಗಾಗಿ ಅರ್ಜಿ ಸಲ್ಲಿಸಿದರೆ ಪ್ರತಿ ಅರ್ಜಿಯ ಮಾಹಿತಿಯನ್ನು ಹೊಸ ತಂತ್ರಾಂಶಕ್ಕೆ ಅಳವಡಿಸಲು ಮಾಡಲು ಸುಮಾರು ಅರ್ಧ ದಿನ ಹಿಡಿಯುತ್ತಿದೆ. ಜೊತೆಗೆ ಅರ್ಜಿ ಸಲ್ಲಿಸಲೆಂದೇ ವೃದ್ಧರು, ಮಹಿಳೆಯರು ಪಾಲಿಕೆಯ ಎಲ್ಲ ೯ ವಲಯ ಕಚೇರಿಗಳ ಎದುರು ಗಂಟೆಗಟ್ಟಲೆ ಕಾದು ನಿಲ್ಲುವಂತಾಗಿದೆ. ಸಿಎಂ ತವರು ಜಿಲ್ಲೆಯಲ್ಲಿರುವ ನಗರದಲ್ಲಿಯೇ ಈ ಪರಿಸ್ಥಿತಿ ಉಂಟಾಗಿದ್ದರೂ ಸಿಎಂ ಅವರು ಏಕೆ ಗಮನಿಸಿಲ್ಲ ಎಂಬುದು ಬೇಸರದ ಸಂಗತಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ಈಗಾಗಲೇ ದೊಡ್ಡ ನಗರಗಳಾದ ಮುಂಬಯಿ, ಜೋಯಿಡಾ, ದೆಹಲಿ ಮೊದಲಾದ ಕಡೆಗಳಲ್ಲಿ ಇ- ಖಾತೆ ನೀಡಿಕೆ ವ್ಯವಸ್ಥೆ ಜಾರಿಯಲ್ಲಿದ್ದು, ಅಲ್ಲೆಲ್ಲಾ ಅತ್ಯಾಧುನಿಕ ತಂತ್ರಾಂಶ ಬಳಸಿರುವ ಕಾರಣ ಇ-ಖಾತೆಯು ಆಸ್ತಿ ಮಾಲೀಕರಿಗೆ ಬೆರಳ ತುದಿಯಲ್ಲೇ ಸಿಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಬಳಸಲಾಗುತ್ತಿರುವ ತಂತ್ರಾಂಶ ತೀರಾ ಹಳೆಯದಾಗಿದೆ. ಇದನ್ನು ರಾಜ್ಯವ್ಯಾಪಿ ಜಾರಿಗೆ ತರುವ ಮುನ್ನ ಯಾವುದಾದರೂ ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಜಾರಿಗೊಳಿಸಿ, ಸಾಧಕ ಬಾಧಕ ಪರಿಶೀಲಿಸಿ, ಲೋಪಗಳನ್ನು ಸರಿಪಡಿಸಿಕೊಂಡ ಬಳಿಕ ರಾಜ್ಯಾದ್ಯಂತ ಜಾರಿಗೊಳಿಸಬೇಕಾಗಿತ್ತು. ಈ ರೀತಿ ಮಾಡದ ಕಾರಣ ಈಗ ಜನತೆ ಸಮಸ್ಯೆ ಎದುರಿಸಬೇಕಾಗಿದೆ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ನಗರಪಾಲಿಕೆ ಮಾಜಿ ಸದಸ್ಯ ಬಿ.ವಿ.ಮಂಜುನಾಥ್ ಅವರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವ್ಯವಸ್ಥೆಯಿಂದ ಇ-ಖಾತೆ ಇಲ್ಲದೆ ಯಾವುದೇ ಆಸ್ತಿ ಕ್ರಯ ನೋಂದಣಿಯಾಗುವುದಿಲ್ಲ. ಹಳೇ ಖಾತೆಯಲ್ಲಿನ ಮಾಹಿತಿಯನ್ನೇ ಇ-ಖಾತೆಗೆ ವರ್ಗಾಯಿಸುವುದಾದರೆ, ಆಸ್ತಿಗಳನ್ನು ಹಳೇ ಖಾತೆಯ ಮಾಹಿತಿಯ ಮೇಲೆ ಕ್ರಯ, ನೋಂದಣಿಗೆ ಅವಕಾಶ ನೀಡಬಹುದಾಗಿದ್ದು, ಸರ್ಕಾರ ಈ ಕುರಿತು ಗಮನಹರಿಸಬೇಕೆಂದು ಆಗ್ರಹಿಸಿದರು.

ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸುಬ್ಬಯ್ಯ, ರೂಪಾ ಯೋಗೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

3 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

3 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

3 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

3 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

6 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

7 hours ago