E-Khata System
ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಯಾವುದೇ ಪೂರ್ವ ಪ್ರಯೋಗ ಸಾಧಕ, ಬಾಧಕಗಳನ್ನು ಪರೀಕ್ಷೆಗೆ ಒಳಪಡಿಸದೇ ಅವೈಜ್ಞಾನಿಕವಾಗಿ ರಾಜ್ಯಾದ್ಯಂತ ಎಲ್ಲಾ ಆಸ್ತಿಗಳಿಗೆ ಇ-ಖಾತಾ ಕಡ್ಡಾಯವಾಗಬೇಕೆಂದು ಆದೇಶ ಮಾಡಿದೆ.
ಆದರೆ ಅದಕ್ಕಾಗಿ ಸದ್ಯ ಬಳಸುತ್ತಿರುವ ತಂತ್ರಾಂಶ ಅಸಪರ್ಮಕವಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಆಸ್ತಿಗಳಿಗೆ ಇ- ಖಾತೆ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಿದ್ದರೂ ಪ್ರಯೋಜನವಾಗದೇ ದಿನಗಟ್ಟಲೆ ಪರದಾಡುವಂತಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದರು.
ಮೈಸೂರು ನಗರದಲ್ಲಿಯೇ ಸುಮಾರು ೨.೫ ಲಕ್ಷ ಆಸ್ತಿಗಳಿವೆ. ಆಸ್ತಿ ಮಾಲೀಕರು ಇ- ಖಾತೆಗಾಗಿ ಅರ್ಜಿ ಸಲ್ಲಿಸಿದರೆ ಪ್ರತಿ ಅರ್ಜಿಯ ಮಾಹಿತಿಯನ್ನು ಹೊಸ ತಂತ್ರಾಂಶಕ್ಕೆ ಅಳವಡಿಸಲು ಮಾಡಲು ಸುಮಾರು ಅರ್ಧ ದಿನ ಹಿಡಿಯುತ್ತಿದೆ. ಜೊತೆಗೆ ಅರ್ಜಿ ಸಲ್ಲಿಸಲೆಂದೇ ವೃದ್ಧರು, ಮಹಿಳೆಯರು ಪಾಲಿಕೆಯ ಎಲ್ಲ ೯ ವಲಯ ಕಚೇರಿಗಳ ಎದುರು ಗಂಟೆಗಟ್ಟಲೆ ಕಾದು ನಿಲ್ಲುವಂತಾಗಿದೆ. ಸಿಎಂ ತವರು ಜಿಲ್ಲೆಯಲ್ಲಿರುವ ನಗರದಲ್ಲಿಯೇ ಈ ಪರಿಸ್ಥಿತಿ ಉಂಟಾಗಿದ್ದರೂ ಸಿಎಂ ಅವರು ಏಕೆ ಗಮನಿಸಿಲ್ಲ ಎಂಬುದು ಬೇಸರದ ಸಂಗತಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.
ಈಗಾಗಲೇ ದೊಡ್ಡ ನಗರಗಳಾದ ಮುಂಬಯಿ, ಜೋಯಿಡಾ, ದೆಹಲಿ ಮೊದಲಾದ ಕಡೆಗಳಲ್ಲಿ ಇ- ಖಾತೆ ನೀಡಿಕೆ ವ್ಯವಸ್ಥೆ ಜಾರಿಯಲ್ಲಿದ್ದು, ಅಲ್ಲೆಲ್ಲಾ ಅತ್ಯಾಧುನಿಕ ತಂತ್ರಾಂಶ ಬಳಸಿರುವ ಕಾರಣ ಇ-ಖಾತೆಯು ಆಸ್ತಿ ಮಾಲೀಕರಿಗೆ ಬೆರಳ ತುದಿಯಲ್ಲೇ ಸಿಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಬಳಸಲಾಗುತ್ತಿರುವ ತಂತ್ರಾಂಶ ತೀರಾ ಹಳೆಯದಾಗಿದೆ. ಇದನ್ನು ರಾಜ್ಯವ್ಯಾಪಿ ಜಾರಿಗೆ ತರುವ ಮುನ್ನ ಯಾವುದಾದರೂ ನಗರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಜಾರಿಗೊಳಿಸಿ, ಸಾಧಕ ಬಾಧಕ ಪರಿಶೀಲಿಸಿ, ಲೋಪಗಳನ್ನು ಸರಿಪಡಿಸಿಕೊಂಡ ಬಳಿಕ ರಾಜ್ಯಾದ್ಯಂತ ಜಾರಿಗೊಳಿಸಬೇಕಾಗಿತ್ತು. ಈ ರೀತಿ ಮಾಡದ ಕಾರಣ ಈಗ ಜನತೆ ಸಮಸ್ಯೆ ಎದುರಿಸಬೇಕಾಗಿದೆ ಎಂದು ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ನಗರಪಾಲಿಕೆ ಮಾಜಿ ಸದಸ್ಯ ಬಿ.ವಿ.ಮಂಜುನಾಥ್ ಅವರು ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ವ್ಯವಸ್ಥೆಯಿಂದ ಇ-ಖಾತೆ ಇಲ್ಲದೆ ಯಾವುದೇ ಆಸ್ತಿ ಕ್ರಯ ನೋಂದಣಿಯಾಗುವುದಿಲ್ಲ. ಹಳೇ ಖಾತೆಯಲ್ಲಿನ ಮಾಹಿತಿಯನ್ನೇ ಇ-ಖಾತೆಗೆ ವರ್ಗಾಯಿಸುವುದಾದರೆ, ಆಸ್ತಿಗಳನ್ನು ಹಳೇ ಖಾತೆಯ ಮಾಹಿತಿಯ ಮೇಲೆ ಕ್ರಯ, ನೋಂದಣಿಗೆ ಅವಕಾಶ ನೀಡಬಹುದಾಗಿದ್ದು, ಸರ್ಕಾರ ಈ ಕುರಿತು ಗಮನಹರಿಸಬೇಕೆಂದು ಆಗ್ರಹಿಸಿದರು.
ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಸುಬ್ಬಯ್ಯ, ರೂಪಾ ಯೋಗೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…
ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…
ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…
ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…
ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್ ಡಾ.ಗಿರೀಶ್ ಭಾರದ್ವಾಜ್ ಅವರು ಇಂದು ನಿಧನರಾಗಿದ್ದಾರೆ.…
ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…