ಮೈಸೂರು

ಮೈಸೂರಿನ ಈ ಗ್ರಾಮದಲ್ಲಿ ಅಸ್ಪೃಶ್ಯತೆ ಜೀವಂತ, ದಲಿತರಿಗಿಲ್ಲ ದೇವಾಲಯ ಪ್ರವೇಶ

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ.

ಜಿಲ್ಲೆಯ ವರಣಾದ ಕಿರಾಳು ಗ್ರಾಮದ ಶಂಭುಮಹಾಲಿಂಗೇಶ್ವರ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಲು ಅರ್ಚಕರು ಹಾಗೂ ಗ್ರಾಮಸ್ಥರು ಅವಕಾಶ ನೀಡದೇ ಅಸ್ಪೃಶ್ಯತೆ ಆಚರಿಸಿದ್ದಾರೆ. ಈ ಬಗ್ಗೆ ಗ್ರಾಮದ ನವೀನ್‌ ಎಂಬುವವರು ತಹಶೀಲ್ದಾರ್‌ ಮಹೇಶ್ ಕುಮಾರ ಅವರಿಗೆ ದೂರು ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ತಹಶೀಲ್ದಾರ್‌, ವರುಣಾ ಪಿಎಸ್‌ಐ ಚೇತನ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್‌ ಅವರು ಗ್ರಾಮಸ್ಥರ ಮನವೊಲಿಸಿ ನಿರ್ಬಂಧ ಹೇರಿದ್ದ ನವೀನ್ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಿದರು. ಅಧಿಕಾರಿಗಳ ಸಮ್ಮುಖದಲ್ಲೇ ನವೀನ್‌ ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರು. ಬಳಿಕ ಅಧಿಕಾರಿಗಳು ದೇವಸ್ಥಾನದ ಆವರಣದಲ್ಲೇ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸುವ ಮೂಲಕ ಗ್ರಾಮಸ್ಥರಿಗೆ ವಾರ್ನಿಂಗ್‌ ನೀಡಿದ್ದಾರೆ.

ತಹಶೀಲ್ದಾರ್‌ ಮಹೇಶ್‌ ಕುಮಾರ್‌, ಉಪ ತಹಶೀಲ್ದಾರ್‌ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿ ಕೀರ್ತಿ ಕುಮಾರ್‌ ಮತ್ತು ಅಬ್ದುಲ್‌ ರಶೀದ್‌ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿಕೊಳ್ಳುವ ಭಾರತದಲ್ಲಿ ಈಗಲೂ ಅಸ್ಪೃಶ್ಯತೆ ಆಚರಣೆ ಕಂಡುಬರುವುದು ಶೋಚನಿಯ. ಅದರಲ್ಲೂ ಮೌಡ್ಯಾರಚಣೆ ಹಾಗೂ ಅನಿಷ್ಠ ಪದ್ಧತಿಗಳ ವಿರುದ್ಧ  ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್‌.ಸಿ ಮಹದೇವಪ್ಪನವರ ತಾಲೂಕಿನಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ವಿಪರ್ಯಾಸವೇ ಸರಿ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಚರಂಡಿಯಿಂದ ವಿದ್ಯುತ್ ಕಂಬವನ್ನು ಬೇರ್ಪಡಿಸಿ

ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…

42 mins ago

ಓದುಗರ ಪತ್ರ: ಬೇಲಿಯೇ ಎದ್ದು ಹೊಲ ಮೇಯ್ದಂತೆ !

ಮೈಸೂರು ನಗರದ ಪ್ರತಿಷ್ಠಿತ ಸಹಕಾರ ಬ್ಯಾಂಕ್ ಒಂದರಲ್ಲಿ ಸಾಲ ನೀಡುವಿಕೆಯಲ್ಲಿ ಕೊಟ್ಯಂತರ ರೂ. ಅವ್ಯವಹಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.…

44 mins ago

ಓದುಗರ ಪತ್ರ: ಕೆಪಿಎಸ್‌ಸಿ ಶುದ್ಧೀಕರಣದ ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯದ ಅತ್ಯುನ್ನತ ನಾಗರಿಕ ಸೇವೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿಯುತ ಸಂಸ್ಥೆಯಾಗಿದೆ. ಆದರೆ ಇತ್ತೀಚಿನ…

47 mins ago

ದಸರೆಯ ಹಿಂದೆ ಸಾಗುವ ಗಜಪಡೆ ಮಹಾಯಾನ

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮಾವುತ - ಆನೆ ನಡುವೆ ಹೃದಯಸ್ಪರ್ಶಿ ಸಂಬಂಧ ಮೈಸೂರು ದಸರಾ ಎಂದಾಕ್ಷಣ ನಮ್ಮ ಕಣ್ಣ…

49 mins ago

ಗರ್ಭಕೋಶ ಕ್ಯಾನ್ಸರ್‌ಗೆ ಲಸಿಕೆ ಅಸ್ತ್ರ

ಚಿರಂಜೀವಿ ಸಿ. ಹುಲ್ಲಹಳ್ಳಿ ಜಿಲ್ಲೆಯಲ್ಲಿ ಎಚ್‌ಪಿವಿ ಅಭಿಯಾನ; ಶೇ.೬೮.೮ರಷ್ಟು ಪ್ರಗತಿ ೧೫,೫೧೮ ಬಾಲಕಿಯರಿಗೆ ಲಸಿಕೆ ನೀಡುವ ಗುರಿ; ೮,೩೬೦ ಸಾಧನೆ…

53 mins ago

ಕೊಡಗಿನಲ್ಲಿ ಇಂದು ಕೈಲ್‌ಪೊಳ್ದ್ ಸಂಭ್ರಮ

ಎಸ್.ಎ. ಹುಸೇನ್ ಆಯುಧಗಳಿಗೆ ವಿಶೇಷ ಪೂಜೆ; ಜಿಲ್ಲೆಯಾದ್ಯಂತ ಸಂಭ್ರಮದ ಹಬ್ಬದಾಚರಣೆಗೆ ಸಿದ್ಧತೆ ಮಡಿಕೇರಿ: ಕೊಡಗಿನ ವಿಶಿಷ್ಟ ಸಂಸ್ಕೃತಿ ಹಾಗೂ ಪರಂಪರೆಯ…

60 mins ago