ಮೈಸೂರು

ಮೈಸೂರಿನ ಈ ಗ್ರಾಮದಲ್ಲಿ ಅಸ್ಪೃಶ್ಯತೆ ಜೀವಂತ, ದಲಿತರಿಗಿಲ್ಲ ದೇವಾಲಯ ಪ್ರವೇಶ

ಮೈಸೂರು: ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯು ಒಂದು. ಜಾತಿ ವ್ಯವಸ್ಥೆ ಹಾಗೂ ಅಸ್ಪಶ್ಯತೆ ನಿರ್ಮೂಲನೆಗೆ ಕಾನೂನುಗಳಿದ್ದರು, ಇಂದಿಗೂ ಬಹುತೇಕ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಮುಂದುವರಿದಿದೆ. ಅದೇ ರೀತಿ, ಮೈಸೂರು ತಾಲೂಕಿನ ಕಿರಾಳು ಗ್ರಾಮದಲ್ಲೂ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ.

ಜಿಲ್ಲೆಯ ವರಣಾದ ಕಿರಾಳು ಗ್ರಾಮದ ಶಂಭುಮಹಾಲಿಂಗೇಶ್ವರ ದೇವಸ್ಥಾನಕ್ಕೆ ದಲಿತರು ಪ್ರವೇಶಿಸಲು ಅರ್ಚಕರು ಹಾಗೂ ಗ್ರಾಮಸ್ಥರು ಅವಕಾಶ ನೀಡದೇ ಅಸ್ಪೃಶ್ಯತೆ ಆಚರಿಸಿದ್ದಾರೆ. ಈ ಬಗ್ಗೆ ಗ್ರಾಮದ ನವೀನ್‌ ಎಂಬುವವರು ತಹಶೀಲ್ದಾರ್‌ ಮಹೇಶ್ ಕುಮಾರ ಅವರಿಗೆ ದೂರು ನೀಡಿದ್ದಾರೆ.

ಕೂಡಲೇ ಎಚ್ಚೆತ್ತ ತಹಶೀಲ್ದಾರ್‌, ವರುಣಾ ಪಿಎಸ್‌ಐ ಚೇತನ್‌ ಹಾಗೂ ಇತರ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್‌ ಅವರು ಗ್ರಾಮಸ್ಥರ ಮನವೊಲಿಸಿ ನಿರ್ಬಂಧ ಹೇರಿದ್ದ ನವೀನ್ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಿದರು. ಅಧಿಕಾರಿಗಳ ಸಮ್ಮುಖದಲ್ಲೇ ನವೀನ್‌ ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರು. ಬಳಿಕ ಅಧಿಕಾರಿಗಳು ದೇವಸ್ಥಾನದ ಆವರಣದಲ್ಲೇ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸುವ ಮೂಲಕ ಗ್ರಾಮಸ್ಥರಿಗೆ ವಾರ್ನಿಂಗ್‌ ನೀಡಿದ್ದಾರೆ.

ತಹಶೀಲ್ದಾರ್‌ ಮಹೇಶ್‌ ಕುಮಾರ್‌, ಉಪ ತಹಶೀಲ್ದಾರ್‌ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿ ಕೀರ್ತಿ ಕುಮಾರ್‌ ಮತ್ತು ಅಬ್ದುಲ್‌ ರಶೀದ್‌ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಆಧುನಿಕ ಪ್ರಜಾಪ್ರಭುತ್ವ ರಾಷ್ಟ್ರ ಎನಿಸಿಕೊಳ್ಳುವ ಭಾರತದಲ್ಲಿ ಈಗಲೂ ಅಸ್ಪೃಶ್ಯತೆ ಆಚರಣೆ ಕಂಡುಬರುವುದು ಶೋಚನಿಯ. ಅದರಲ್ಲೂ ಮೌಡ್ಯಾರಚಣೆ ಹಾಗೂ ಅನಿಷ್ಠ ಪದ್ಧತಿಗಳ ವಿರುದ್ಧ  ಮಾತನಾಡುವ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್‌.ಸಿ ಮಹದೇವಪ್ಪನವರ ತಾಲೂಕಿನಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ವಿಪರ್ಯಾಸವೇ ಸರಿ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರು ವಾರದ ಅಂಕಣ | ಬದಲಾಗಿದೆ ರಾಜ್ಯ ರಾಜಕಾರಣದ ಸೂತ್ರ

ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…

3 hours ago

ಸಂಪಾದಕೀಯ | ಡಿ.ಕೆ.ಶಿವಕುಮಾರ್‌ ಅವರ ಮುಂದಿದೆ ಸವಾಲುಗಳು

ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…

3 hours ago

ಸೈದ್ಧಾಂತಿಕ ಬದ್ಧತೆ; ಪಕ್ಷದ ಸಿದ್ಧಾಂತದಲ್ಲಿ ರಾಜಿ ಸಲ್ಲದು ; ಡಿಕೆಶಿಗೆ ಸಿದ್ದರಾಮಯ್ಯ ಭಾವನಾತ್ಮಕ ಪೋಸ್ಟ್

ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…

20 hours ago

ಹೊಸ ಸಚಿವ ಸಂಪುಟ ರಚನೆ ಬಗ್ಗೆ ಖರ್ಗೆ ಹೇಳಿದಿಷ್ಟು…

ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…

23 hours ago

ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ನಾಯಕರ ನಡುವೆ ಪೈಪೋಟಿ

ಬೆಂಗಳೂರು : ಡಿ.ಕೆ.ಶಿವಕುಮಾರ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…

1 day ago

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 day ago