Mysore
23
overcast clouds
Light
Dark

ಸಿದ್ದರಾಮಯ್ಯಗೆ ತವರು ಗೆಲ್ಲುವ ತವಕ: ಮತ್ತೆರಡು ದಿನ ಮೈಸೂರು ಪ್ರವಾಸ

ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಏಪ್ರಿಲ್‌ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– 2 ಸಮಾವೇಶಗಳಲ್ಲಿ ಭಾಗವಹಿಸಿ, 13ರಂದು ಮೈಸೂರು ನಗರ, ಹುಣಸೂರು, ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ತಮ್ಮ ತವರು ಜಿಲ್ಲೆಯ ಕ್ಷೇತ್ರ ಗೆಲ್ಲುವ ಹಠಕ್ಕೆ ಬಿದ್ದಿರುವ ಸಿದ್ದರಾಮಯ್ಯ, ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ್‌ ಮತ್ತು ಸುನಿಲ್‌ ಬೋಸ್‌ ಪರ ಮತ ಯಾಚಿಸಲಿದ್ದಾರೆ. ನಂತರ ಪಕ್ಷದ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಲಿದ್ದಾರೆ.

ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮತ್ತೊಂದು ಸುತ್ತಿನ ಪ್ರಚಾರದ ಮೂಲಕ ಮತದಾರನ್ನು ಸೆಳೆಯಲು ಮುಂದಾಗಿದ್ದಾರೆ.