ಬೆಂಗಳೂರು: ಮೈಸೂರು–ಕೊಡಗು ಮತ್ತು ಚಾಮರಾಜನಗರ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ತವರು ಕ್ಷೇತ್ರಗಳನ್ನು ಗೆಲ್ಲಲು, ಏಪ್ರಿಲ್ 12ರಿಂದ ಎರಡು ದಿನ ಮತ್ತೆ ಈ ಎರಡು ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 12ರಂದು ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಜಾಧ್ವನಿ– 2 ಸಮಾವೇಶಗಳಲ್ಲಿ ಭಾಗವಹಿಸಿ, 13ರಂದು ಮೈಸೂರು ನಗರ, ಹುಣಸೂರು, ಪಿರಿಯಾಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.
ತಮ್ಮ ತವರು ಜಿಲ್ಲೆಯ ಕ್ಷೇತ್ರ ಗೆಲ್ಲುವ ಹಠಕ್ಕೆ ಬಿದ್ದಿರುವ ಸಿದ್ದರಾಮಯ್ಯ, ಪಕ್ಷದ ಅಭ್ಯರ್ಥಿಗಳಾದ ಎಂ. ಲಕ್ಷ್ಮಣ್ ಮತ್ತು ಸುನಿಲ್ ಬೋಸ್ ಪರ ಮತ ಯಾಚಿಸಲಿದ್ದಾರೆ. ನಂತರ ಪಕ್ಷದ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಿ ಕಾರ್ಯತಂತ್ರ ರೂಪಿಸಲಿದ್ದಾರೆ.
ಈ ಎರಡೂ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು, ಮತ್ತೊಂದು ಸುತ್ತಿನ ಪ್ರಚಾರದ ಮೂಲಕ ಮತದಾರನ್ನು ಸೆಳೆಯಲು ಮುಂದಾಗಿದ್ದಾರೆ.
ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…