ಮೈಸೂರು

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಗುರುವಾರ ಮಾನಸಗಂಗೋತ್ರಿಯ ಕ್ಲಾಕ್ ಟವರ್‌ನ ಬಳಿ ಜಮಾವಣೆಗೊಂಡ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಯುಜಿಸಿಯ ಹೊಸ ನಿಯಮಾವಳಿಯನ್ನು ಬೆಂಬಲಿಸಿ, ಜಾರಿ ಮಾಡುವಂತೆ ಘೋಷಣೆ ಕೂಗಿದರು.

ಇಂದಿನ ಎಐ ಕಾಲದಲ್ಲೂ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ನಾನಾ ಸ್ವರೂಪದ ಶೋಷಣೆಯನ್ನು ತಡೆಗಟ್ಟಲು ಯುಜಿಸಿ ತನ್ನ ವ್ಯಾಪ್ತಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಇದಕ್ಕೆ ಕೆಲವು ಸಂಘಟನೆಗಳವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧ ಯಾಕೆ ಎಂದು ಪ್ರಶ್ನಿಸಿದರು.

ಹಾಗಾದರೆ ಕ್ಯಾಂಪಸ್‌ಗಳಲ್ಲಿ ಶೋಷಣೆ ಇಲ್ಲವೇ? ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣ ಏನು? ಅರ್ಟಿಕಲ್ 17 ಇದ್ದರೂ ಅಸ್ಪೃಶ್ಯತೆ ಇಲ್ಲವೇ? ಈ ನಿಯಮಾವಳಿಯನ್ನು ವಿರೋಧಿಸಲು ನ್ಯಾಯಯುತ ಕಾರಣ ಏನು? ಎಂದು ಪ್ರಶ್ನಿಸಿದರು.

ಕ್ಯಾಂಪಸ್‌ಗಳು ಸಮಾನತೆ ಬಿತ್ತುವ ಕೇಂದ್ರಗಳಾಗಬೇಕು. ಶೋಷಣೆ ರಹಿತವಾಗಿರಬೇಕು. ಇದು ಕಲಿತ ಶಿಕ್ಷಣಕ್ಕೆ ಮೌಲ್ಯ ಬರುತ್ತದೆ. ಭವಿಷ್ಯದ ಸ್ವಸ್ಥ ಸಮಾಜಕ್ಕೆ ಕಾರಣವಾಗುತ್ತದೆ. ಸಮಾನತೆಯ ಭಾರತ ನನಸಾಗಲು ಈ ನಿಯಮಾವಳಿಗಳು ಕಾರಣ ಆಗುತ್ತದೆ ಎಂದು ಹೇಳಿದರು.

ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ, ಗೌರವಾಧ್ಯಕ್ಷ ಕಲ್ಲಹಳ್ಳಿ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ, ಕಾರ್ಯಾಧ್ಯಕ್ಷ ರೋಹನ್ ಹೊಂಗನೂರು, ಸದಸ್ಯರಾದ ಮಾದೇಶ್ ಸೀಗಿ, ಕಿರಣ್, ಡಾ. ಪ್ರತಾಪ್ ಕವಲಂದೆ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ, ಒಕ್ಕೂಟದ ಗೌರವಾಧ್ಯಕ್ಷ ಶಿವು ಕೋಟೆ, ಕಾರ್ಯದರ್ಶಿ ಗೌತಮ್,ಒಕ್ಕೂಟದ ಸದಸ್ಯರಾದ ಪ್ರವೀಣ್, ಕಿಶೋರ್, ಮಹಾದೇವಸ್ವಾಮಿ, ಅಪ್ಪು, ಅಭಿ, ಸಿದ್ದರಾಜು, ಮನೋಜ್, ಸುಭಾಷ್, ಸಚಿನ್ ಬಸವರಾಜು, ನವೀನ್ ಕೋಳೂರು, ಅಭಿಜಿತ್ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

10 mins ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

47 mins ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

2 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

2 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

3 hours ago