ಮೈಸೂರು

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ ಮೈಸೂರು ವಿ.ವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದವತಿಯಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಗುರುವಾರ ಮಾನಸಗಂಗೋತ್ರಿಯ ಕ್ಲಾಕ್ ಟವರ್‌ನ ಬಳಿ ಜಮಾವಣೆಗೊಂಡ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಯುಜಿಸಿಯ ಹೊಸ ನಿಯಮಾವಳಿಯನ್ನು ಬೆಂಬಲಿಸಿ, ಜಾರಿ ಮಾಡುವಂತೆ ಘೋಷಣೆ ಕೂಗಿದರು.

ಇಂದಿನ ಎಐ ಕಾಲದಲ್ಲೂ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ನಾನಾ ಸ್ವರೂಪದ ಶೋಷಣೆಯನ್ನು ತಡೆಗಟ್ಟಲು ಯುಜಿಸಿ ತನ್ನ ವ್ಯಾಪ್ತಿಯಲ್ಲಿ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಇದಕ್ಕೆ ಕೆಲವು ಸಂಘಟನೆಗಳವರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವಿರೋಧ ಯಾಕೆ ಎಂದು ಪ್ರಶ್ನಿಸಿದರು.

ಹಾಗಾದರೆ ಕ್ಯಾಂಪಸ್‌ಗಳಲ್ಲಿ ಶೋಷಣೆ ಇಲ್ಲವೇ? ರೋಹಿತ್ ವೇಮುಲ ಆತ್ಮಹತ್ಯೆಗೆ ಕಾರಣ ಏನು? ಅರ್ಟಿಕಲ್ 17 ಇದ್ದರೂ ಅಸ್ಪೃಶ್ಯತೆ ಇಲ್ಲವೇ? ಈ ನಿಯಮಾವಳಿಯನ್ನು ವಿರೋಧಿಸಲು ನ್ಯಾಯಯುತ ಕಾರಣ ಏನು? ಎಂದು ಪ್ರಶ್ನಿಸಿದರು.

ಕ್ಯಾಂಪಸ್‌ಗಳು ಸಮಾನತೆ ಬಿತ್ತುವ ಕೇಂದ್ರಗಳಾಗಬೇಕು. ಶೋಷಣೆ ರಹಿತವಾಗಿರಬೇಕು. ಇದು ಕಲಿತ ಶಿಕ್ಷಣಕ್ಕೆ ಮೌಲ್ಯ ಬರುತ್ತದೆ. ಭವಿಷ್ಯದ ಸ್ವಸ್ಥ ಸಮಾಜಕ್ಕೆ ಕಾರಣವಾಗುತ್ತದೆ. ಸಮಾನತೆಯ ಭಾರತ ನನಸಾಗಲು ಈ ನಿಯಮಾವಳಿಗಳು ಕಾರಣ ಆಗುತ್ತದೆ ಎಂದು ಹೇಳಿದರು.

ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ, ಗೌರವಾಧ್ಯಕ್ಷ ಕಲ್ಲಹಳ್ಳಿ ಕುಮಾರ್, ಉಪಾಧ್ಯಕ್ಷ ಮಲ್ಲೇಶ್ ಬಾಚಹಳ್ಳಿ, ಕಾರ್ಯಾಧ್ಯಕ್ಷ ರೋಹನ್ ಹೊಂಗನೂರು, ಸದಸ್ಯರಾದ ಮಾದೇಶ್ ಸೀಗಿ, ಕಿರಣ್, ಡಾ. ಪ್ರತಾಪ್ ಕವಲಂದೆ, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಗಜೇಂದ್ರ ಚಿನ್ನಸ್ವಾಮಿ, ಒಕ್ಕೂಟದ ಗೌರವಾಧ್ಯಕ್ಷ ಶಿವು ಕೋಟೆ, ಕಾರ್ಯದರ್ಶಿ ಗೌತಮ್,ಒಕ್ಕೂಟದ ಸದಸ್ಯರಾದ ಪ್ರವೀಣ್, ಕಿಶೋರ್, ಮಹಾದೇವಸ್ವಾಮಿ, ಅಪ್ಪು, ಅಭಿ, ಸಿದ್ದರಾಜು, ಮನೋಜ್, ಸುಭಾಷ್, ಸಚಿನ್ ಬಸವರಾಜು, ನವೀನ್ ಕೋಳೂರು, ಅಭಿಜಿತ್ ಮತ್ತಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

4 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

5 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

6 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

6 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

8 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

9 hours ago