ಮೈಸೂರು

ಉತ್ತಮ ಕೃಷಿಗೆ ಜೈವಿಕ ಗೊಬ್ಬರ ಬಳಸಿ : ತೋಟಗಾರಿಕೆ ವಿ.ವಿ ಕುಲಪತಿ ವಿಷ್ಣವರ್ಧನ ಸಲಹೆ

ಮೈಸೂರು : ಕೃಷಿ ಪದ್ಧತಿಯಲ್ಲಿ ರಾಸಾಯನಿಕ ಗೊಬ್ಬರದ ಬಳಕೆ ಕಡಿಮೆ ಮಾಡಿ ಹಸಿರೆಲೆ ಹಾಗೂ ಜೈವಿಕ ಗೊಬ್ಬರಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಮುಂದಿನ ಪೀಳಿಗೆಗೆ ಉತ್ತಮ ಕೃಷಿ ಭೂಮಿ ಹಾಗೂ ಉತ್ತಮ ಪರಿಸರವನ್ನು ನೀಡಬಹುದು ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ವಿಷ್ಣವರ್ಧನ ಅವರು ಅಭಿಪ್ರಾಯಪಟ್ಟರು.

ತೋಟಗಾರಿಕೆ ಇಲಾಖೆ ಹಾಗೂ ತೋಟಗಾರಿಕೆ ಮಹಾವಿದ್ಯಾನಿಲಯ ಮತ್ತು ಆಕಾಶವಾಣಿ ವತಿಯಿಂದ ಸೋಮವಾರ ಡಾ. ಎಂ. ಹೆಚ್. ಮರೀಗೌಡ ಸಭಾಂಗಣ, ಕರ್ಜನ್ ಪಾರ್ಕ್ ನಲ್ಲಿ ಆಯೋಜಿಸಲಾಗಿದ್ದ “ಹಣ್ಣು-ಹೊನ್ನು ” ಬಾನುಲಿ ಸರಣಿಯಲ್ಲಿ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷಿ ಭೂಮಿಯನ್ನು ಬೇರೆ ಬೇರೆ ಉದ್ಯಮಗಳಿಗೆ ಅತಿಯಾಗಿ ಬಳಸಿಕೊಳ್ಳುತ್ತಿದ್ದು ಪ್ರತಿ ವರ್ಷ ವು ಕೃಷಿ ಭೂಮಿ ವಿಸ್ತೀರ್ಣ ಕಡಿಮೆಯಾಗುತ್ತಿದೆ. ಇಂದಿನ ಯುವಕರು ಕೃಷಿ ಭೂಮಿ ಇದ್ದರು ಪಟ್ಟಣದ ಕಡೆಗೆ ಮುಖಮಾಡಿದ್ದಾರೆ ಎಂದು ಬೇಸರವನ್ನು ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಅತೀ ಹೆಚ್ಚು ತೋಟಗಾರಿಕೆಯಲ್ಲಿ ತೆಂಗು ಬೆಳೆಯನ್ನು ಬೆಳೆಯಲು ಮುಂದಾಗಿದೆ. ಇದೇ ರೀತಿ ತೋಟಗಾರಿಕೆಯಲ್ಲಿ ಲಾಭದಾಯಕವಾದ ಹಲವಾರು ಬೆಳೆಗಳಿವೆ ರೈತರು ತೋಟಗಾರಿಕೆ ಬೆಳವಣಿಗೆಯನ್ನು ಹೆಚ್ಚು ಮಾಡಬೇಕು.ಮಿಶ್ರ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಆದ ಡಾ. ಹಂಚಿನಮನಿ ಅವರು ಮಾತನಾಡಿ ವಿದೇಶಗಳಲ್ಲಿ ಬೆಳೆಯಲಾಗದ ಹಲವು ಕೃಷಿ ಉತ್ಪನ್ನ ಗಳನ್ನು ಭಾರದಲ್ಲಿ ಬೆಳೆಯಬಹುದು. ಭಾರತದಲ್ಲಿ ವೈವಿಧ್ಯಮ ಕೃಷಿ ಉತ್ಪನ್ನಗಳನ್ನು ಬೆಳೆಯುವ ದೇಶ. ವಿದೇಶದ ಮಾರುಕಟ್ಟೆಗಳಲ್ಲಿ ಭಾರತದ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇರುತ್ತದೆ. ಹೊರ ದೇಶಕ್ಕೆ ರಫ್ತು ಮಾಡುವ ಗುಣಮಟ್ಟವಿರುವ ಬೆಳೆಗಳನ್ನು ಬೆಳೆಯಿರಿ.
ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೆ ಭಾರತದಲ್ಲಿ ವೈವಿಧ್ಯಮಯವಾದಂತ ಕೃಷಿ ಉತ್ಪನ್ನ ಗಳನ್ನು ಬೆಳೆಯಲಾಗುತ್ತಿದೆ. ರೈತರು ಬೇಡಿಕೆ ಇರುವ ಬೆಳೆ ಬೆಳೆದು ಆರ್ಥಿಕವಾಗಿ ಸದೃಢರಾಗಬೇಕು. ಮಣ್ಣಿನ ಗುಣಮಟ್ಟವನ್ನು ಹೆಚ್ಚಿಸಿ ಸಂರಕ್ಷಿಸುವ ಕಡೆ ಚಿಂತಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ್ ಅಂಗಡಿ ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕರು ಎನ್. ಕೇಶವಮೂರ್ತಿ ಹಾಗೂ ರೈತರು, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ | ನೀರು ಬಿಟ್ಟು ರೈತರಿಗೆ ಅನುಕೂಲ ಕಲ್ಪಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆಯು ವನಸಿರಿ ನಾಡು ಎಂದೆ ಪ್ರಸಿದ್ಧಿ ಪಡೆದಿದೆ ಹಾಗೆ ಜಲಾಶಯಗಳ ಬೀಡು ಎಂದು ಹೆಸರು ಪಡೆದುಕೊಂಡಿದೆ. ಈಗ…

18 hours ago

ಓದುಗರ ಪತ್ರ | ಈ ವಿಶಾಲ ಪಾರ್ಕ್‌ಗೆ ಬೇಕು ಶೌಚಾಲಯ

ಮೈಸೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ಕುವೆಂಪು ನಗರದ ಎಂ -ಬ್ಲಾಕ್ ನಲ್ಲಿರುವ ಭಾರತ್ ಮಾತಾ ಉದ್ಯಾನವನವು ಕುವೆಂಪು ನಗರದ ಪ್ರಮುಖ…

18 hours ago

ಓದುಗರ ಪತ್ರ | ಚರಂಡಿ ಸೇರುತ್ತಿರುವ ನೀರಿಗೆ ‘ತಡೆ’ಹಾಕಿ

ಮೈಸೂರಿನ ವಿಜಯನಗರ ಎರಡನೇ ಹಂತದ ದಿವ್ಯರೂಪ ಕಲ್ಯಾಣ ಮಂಟಪದ ಸಮೀಪ ಮೂರು ವಾರಗಳಿಂದ ದಿನದಲ್ಲಿ ಆರು ಗಂಟೆಗಳ ಕಾಲ ಪ್ರತಿ…

18 hours ago

ನಾಡಿನುದ್ದಕ್ಕೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಕಂಪು

ಡಿಸೆಂಬರ್‌ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…

18 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಗಾಂಧಿ ವಾದಕ್ಕೆ ಮನಸೋತಿದ್ದ ಬಳ್ಳಾರಿ ಸಿದ್ದಮ್ಮ

ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಆಹಾರದ ಕುರಿತು ಕೆಲವು ಚಿಲ್ಲರೆ ಪ್ರಯೋಗಗಳು

ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…

19 hours ago