ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

5 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

5 hours ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

6 hours ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

8 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

8 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

9 hours ago