ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

4 hours ago

ಅಧಿವೇಶನವನ್ನು ಒಂದು ವಾರ ವಿಸ್ತರಿಸಲು ಮನವಿ : ಸ್ಪೀಕರ್‌ಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…

16 hours ago