ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಂಡು ಮಗುವಿಗೆ ಜನ್ಮ ನೀಡಿದ ಡಾಲಿ ಧನಂಜಯ್ ಪತ್ನಿ ಧನ್ಯತಾ

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ ಗಂಡು ಮಗು ಜನಿಸಿದೆ. ಈ ಸಿಹಿ ಸುದ್ದಿಯನ್ನು ಡಾಲಿ ಧನಂಜಯ್‌…

8 mins ago

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

4 hours ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

4 hours ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

4 hours ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

4 hours ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

14 hours ago