ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

12 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

12 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

12 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

12 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

13 hours ago