ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

16 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

16 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

16 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

16 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

16 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

16 hours ago