ಮೈಸೂರು

ನೇರ ನಿಷ್ಠೂರವಾದಿ ಶ್ರೀನಿವಾಸ್‌ ಪ್ರಸಾದ್‌ ಅವರ ನಿಧನ ಹಳೇ ಮೈಸೂರು ಭಾಗಕ್ಕೆ ತುಂಬಲಾರದ ನಷ್ಟ: ಪ್ರತಾಪ್‌ ಸಿಂಹ

ಮೈಸೂರು: ನಮ್ಮ ಪಕ್ಷದ ಹಿರಿಯ ನೇತಾರರು, ಚಾಮರಾಜನಗರ ಸಂಸದದರಾದ ಪ್ರಸಾದ್‌ ಅವರು ನಮ್ಮನ್ನು ಅಗಲಿದ್ದಾರೆ, ಅವರಿಗೆ ನನ್ನ ನಮನಗಳು. ಅವರು ನನ್ನನ್ನು ವಯಕ್ತಿಕವಾಗಿ ತಮ್ಮ ಮಕ್ಕಳ ರೀತಿಯಲ್ಲಿ ನೋಡಿಕೊಂಡಿದ್ದಾರೆ ಅದಕ್ಕೆ ನಾನು ಸದಾ ಚಿರಋಣಿಯಾದ್ದೇನೆ ಎಂದು ಸಂಸದ ಪ್ರತಾಪ್‌ ಸಿಂಹ, ವಿ ಶ್ರೀನಿವಾಸ್‌ ಪ್ರಸಾದ್‌ ಅವರ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ದಲಿತ ಸಮಾಜಕ್ಕೆ ಧ್ವನಿಯಾಗಿರುವ ಜೊತೆಗೆ ಅನ್ಯ ಸಮುದಾಯದ ತಪ್ಪು ಒಪ್ಪುಗಳನ್ನು ನೇರ-ನಿಷ್ಠುರವಾಗಿ ಮಾತನಾಡಿ ಒಳ್ಳೆಯ ಹೆಸರು ಮಾಡಿಕೊಂಡಿರುವ ಸಜ್ಜನ ರಾಜಕಾರಣಿ ಶ್ರೀನಿವಾಸ್‌ ಪ್ರಸಾದ್‌ ಅವರು ಎಂದು ಗುಣಗಾನ ಮಾಡಿದ್ದಾರೆ.

ಅವರು ಎಲ್ಲೇ ಸಿಕ್ಕರು ಮೊದಲು ಅವರ ಕಾಲು ಮುಟ್ಟಿ ನಮಸ್ಕರಿಸುತ್ತಿದ್ದೆ. ಯಾಕೆಂದರೆ ಅದು ಅವರ ವ್ಯಕ್ತಿತ್ವಕ್ಕೋಸ್ಕರ. ಯಾವುದೋ ಒಂದು ಚಿಂತನೆಯನ್ನು ಇಟ್ಟುಕೊಂಡು ಅದನ್ನೇ ಪ್ರತಿಪಾದಿರುವವರು ಹಲವಾರು ಜನರಿದ್ದಾರೆ. ಆದರೆ ಕೇವಲ ತಪ್ಪು ಮತ್ತು ಸರಿ ಈ ಎರಡೇ ವಿಚಾರಗಳನ್ನಿಟ್ಟುಕೊಂಡು ತಮ್ಮ ನಿಲುವನ್ನು ನಿಷ್ಪಕ್ಷಪಾತವಾಗಿ ತೆಗೆದುಕೊಳ್ಳುತ್ತಿದ್ದ ಹಳೇ ಮೈಸೂರು ಭಾಗದ ಏಕಮಾತ್ರ ಹಿಂದುಳಿದ ನಾಯಕ ಎಂದರೇ ಶ್ರೀನವಾಸ್‌ ಪ್ರಸಾದ್‌ ಅವರು. ಅವರ ಅಗಲಿಕೆಯಿಂದ ದಲಿತರ ದೊಡ್ಡ ದನಿ ಉಡುಗಿಹೋಗಿದೆ. ಎಲ್ಲಾ ಸಮಾಜಗಳನ್ನು ತಪ್ಪು, ಸರಿ ಆಧಾರದ ಮೇಲೆ ಅಳೆದು ತೂಗುತ್ತಿದ್ದ ಒಂದು ನಿಷ್ಪಕ್ಷಪಾತವಾದ ಮನಸ್ಸನ್ನು, ಹೃದಯ ವೈಶಾಲ್ಯತೆಯಿದ್ದ ಪ್ರಮುಖ ವ್ಯಕ್ತಿಯನ್ನು ಹಳೇ ಮೈಸೂರು ಭಾಗ ಇಂದು ಕಳೆದುಕೊಂಡಿದೆ ಎಂದು ಸಂತಾಪ ಸೂಚಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

2 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

3 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

5 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

10 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

12 hours ago