ಮೈಸೂರು

ದಯಾನಂದ್‌ ಅಮಾನತು ಸರಿಯಲ್ಲ : ಕೇಂದ್ರ ಸಚಿವ ಸೋಮಣ್ಣ

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ ಮಾಡಿರುವುದು ಮಹಾ ಅಪರಾಧ. ಇದಕ್ಕೆ ಬೆಲೆ ತೆರದಿದ್ದರೆ ಜನರೇ ಪಾಠ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದರು.

ಹೋಗಿರುವ ಜೀವ ವಾಪಸ್ಸು ಬರುತ್ತಾ?
ಪರಿಹಾರ ಮೊತ್ತ 25 ಲಕ್ಷ ಅಲ್ಲ ಇಡೀ ಬಜೆಟ್ ನ್ನ ಪರಿಹಾರವಾಗಿ ಕೊಟ್ಟರು ಹೋಗಿರುವ ಜೀವ ವಾಪಸ್ ಬರುತ್ತಾ? ಇಡೀ ಘಟನೆಯಿಂದ ಬೆಂಗಳೂರಿಗೆ ಅತ್ಯಂತ ಕೆಟ್ಟ ಹೆಸರು ಬಂದಿದೆ. ಸಿಎಂ ಪಟಲಾಂ ಮಾಡಿದ ಎಡವಟ್ಟಿನಿಂದ ಇಷ್ಟೆಲ್ಲಾ ಘಟನೆಗಳು ನಡೆದಿವೆ. ಸಿದ್ದರಾಮಯ್ಯ ಅವರಿಂದ ನಾವು ಇಂತಹ ಆಡಳಿತ ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರಿಸಿದರು.

ರಾಜ್‌ಕುಮಾರ್‌ ಸಾವಿಗೆ ಈ ಘಟನೆ ಹೋಲಿಕೆ ಸರಿಯಲ್ಲ
ಕಾಲ್ತುಳಿತ ಘಟನೆಗೆ ಡಾ.ರಾಜ್ ಕುಮಾರ್ ಅವರ ಸಾವಿನ ಘಟನೆಯನ್ನ ಹೇಗೆ ಹೋಲಿಕೆ ಮಾಡುತ್ತೀರಾ. ಡಾ.ರಾಜ್ ಕುಮಾರ್ ಅವರ ಸಾವಿನ ಸಂಧರ್ಭವೇ ಬೇರೆ ಅವತ್ತಿನ ಪರಿಸ್ಥಿತಿಯೇ ಬೇರೆ‌, ಇವತ್ತಿನ ಪರಿಸ್ಥಿತಿಯೇ ಬೇರೆ. ಅವರ ಸಾವಿಗೆ ಈ ಹೋಲಿಗೆ ಸರಿಯಲ್ಲ. ನೀವು ಈಗ ಮಾಡಿರುವುದು ಪಾಪದ ಕೆಲಸ. ಮೊದಲು ಅದನ್ನ ನೀವು ಒಪ್ಪಿಕೊಳ್ಳಬೇಕು. ಕುರ್ಚಿಗೆ ಅಂಟಿಕೊಂಡು ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಅಂದು ಕೊಂಡಿರಲಿಲ್ಲ ಎಂದರು.

ಹಳಿ ತಪ್ಪಿದ ಸರ್ಕಾರ
ಇದು ಹಳಿ ತಪ್ಪಿದ ಸರ್ಕಾರ. ಟ್ರ್ಯಾಕ್‌ ಇಲ್ಲದೆಯೇ ಓಡುತ್ತಿದೆ. ಅವರ ಒಳ ಒಪ್ಪಂದ ಹೇಗಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್‌ ಸಿದ್ದರಾಮಯ್ಯರಿಗೆ ಕೊಟ್ಟಷ್ಟು ಫ್ರೀ ಹ್ಯಾಂಡ್‌ ಇನ್ನೊಬ್ಬರಿಗೆ ಕೊಟ್ಟಿಲ್ಲ. ಅವರ ವಿವೇಕಕ್ಕೆ ಏನಾಗೊದೆಯೋ ಗೊತ್ತಿಲ್ಲ. ಅಧಿಕಾರಕ್ಕೆ ಜೋತು ಬೀಳದೇ ನೈತಿಕತೆಯಿಂದ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

2 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

2 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

2 hours ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

2 hours ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

2 hours ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

2 hours ago