ಮೈಸೂರು

ದಯಾನಂದ್‌ ಅಮಾನತು ಸರಿಯಲ್ಲ : ಕೇಂದ್ರ ಸಚಿವ ಸೋಮಣ್ಣ

ಮೈಸೂರು : ಕಮಿಷನರ್‌ ದಯಾನಂದ್‌ ದಕ್ಷ ಅಧಿಕಾರಿ. ಅಂತಹವರ ಅಮಾನತು ಸರಿಯಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು.

ನಗರದಲ್ಲಿ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಪೊಲೀಸರು ನೈತಿಕತೆಯ ಮುಖವಾಗಿ ಕೆಲಸ ಮಾಡುತ್ತಿದ್ದಾರೆ. ನಿಮ್ಮ ಪಟಾಲಂ ಪಾಪಕ್ಕೆ ಪೊಲೀಸರನ್ನ ಗುರಿ ಮಾಡಿರುವುದು ಮಹಾ ಅಪರಾಧ. ಇದಕ್ಕೆ ಬೆಲೆ ತೆರದಿದ್ದರೆ ಜನರೇ ಪಾಠ ಕಲಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದರು.

ಹೋಗಿರುವ ಜೀವ ವಾಪಸ್ಸು ಬರುತ್ತಾ?
ಪರಿಹಾರ ಮೊತ್ತ 25 ಲಕ್ಷ ಅಲ್ಲ ಇಡೀ ಬಜೆಟ್ ನ್ನ ಪರಿಹಾರವಾಗಿ ಕೊಟ್ಟರು ಹೋಗಿರುವ ಜೀವ ವಾಪಸ್ ಬರುತ್ತಾ? ಇಡೀ ಘಟನೆಯಿಂದ ಬೆಂಗಳೂರಿಗೆ ಅತ್ಯಂತ ಕೆಟ್ಟ ಹೆಸರು ಬಂದಿದೆ. ಸಿಎಂ ಪಟಲಾಂ ಮಾಡಿದ ಎಡವಟ್ಟಿನಿಂದ ಇಷ್ಟೆಲ್ಲಾ ಘಟನೆಗಳು ನಡೆದಿವೆ. ಸಿದ್ದರಾಮಯ್ಯ ಅವರಿಂದ ನಾವು ಇಂತಹ ಆಡಳಿತ ನಿರೀಕ್ಷೆ ಮಾಡಿರಲಿಲ್ಲ ಎಂದು ಬೇಸರಿಸಿದರು.

ರಾಜ್‌ಕುಮಾರ್‌ ಸಾವಿಗೆ ಈ ಘಟನೆ ಹೋಲಿಕೆ ಸರಿಯಲ್ಲ
ಕಾಲ್ತುಳಿತ ಘಟನೆಗೆ ಡಾ.ರಾಜ್ ಕುಮಾರ್ ಅವರ ಸಾವಿನ ಘಟನೆಯನ್ನ ಹೇಗೆ ಹೋಲಿಕೆ ಮಾಡುತ್ತೀರಾ. ಡಾ.ರಾಜ್ ಕುಮಾರ್ ಅವರ ಸಾವಿನ ಸಂಧರ್ಭವೇ ಬೇರೆ ಅವತ್ತಿನ ಪರಿಸ್ಥಿತಿಯೇ ಬೇರೆ‌, ಇವತ್ತಿನ ಪರಿಸ್ಥಿತಿಯೇ ಬೇರೆ. ಅವರ ಸಾವಿಗೆ ಈ ಹೋಲಿಗೆ ಸರಿಯಲ್ಲ. ನೀವು ಈಗ ಮಾಡಿರುವುದು ಪಾಪದ ಕೆಲಸ. ಮೊದಲು ಅದನ್ನ ನೀವು ಒಪ್ಪಿಕೊಳ್ಳಬೇಕು. ಕುರ್ಚಿಗೆ ಅಂಟಿಕೊಂಡು ಸಿದ್ದರಾಮಯ್ಯ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ನಾನು ಅಂದು ಕೊಂಡಿರಲಿಲ್ಲ ಎಂದರು.

ಹಳಿ ತಪ್ಪಿದ ಸರ್ಕಾರ
ಇದು ಹಳಿ ತಪ್ಪಿದ ಸರ್ಕಾರ. ಟ್ರ್ಯಾಕ್‌ ಇಲ್ಲದೆಯೇ ಓಡುತ್ತಿದೆ. ಅವರ ಒಳ ಒಪ್ಪಂದ ಹೇಗಿದೆಯೋ ಗೊತ್ತಿಲ್ಲ ಎಂದು ಹೇಳಿದರು.
ಕಾಂಗ್ರೆಸ್‌ ಸಿದ್ದರಾಮಯ್ಯರಿಗೆ ಕೊಟ್ಟಷ್ಟು ಫ್ರೀ ಹ್ಯಾಂಡ್‌ ಇನ್ನೊಬ್ಬರಿಗೆ ಕೊಟ್ಟಿಲ್ಲ. ಅವರ ವಿವೇಕಕ್ಕೆ ಏನಾಗೊದೆಯೋ ಗೊತ್ತಿಲ್ಲ. ಅಧಿಕಾರಕ್ಕೆ ಜೋತು ಬೀಳದೇ ನೈತಿಕತೆಯಿಂದ ಹೊಣೆ ಹೊರಬೇಕು ಎಂದು ಆಗ್ರಹಿಸಿದರು.

ಆಂದೋಲನ ಡೆಸ್ಕ್

Recent Posts

ಆಕ್ರಮಣ ತಡೆಯಲು ಸಿದ್ದ : ಅಮೆರಿಕಗೆ ಕ್ಯೂಬಾ ಎಚ್ಚರಿಕೆ

ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…

7 mins ago

ಹನೂರು | ಇಂದಿರಾ ಕ್ಯಾಂಟೀನ್‌ಗೆ ದಿಢೀರ್‌ ಭೇಟಿ ನೀಡಿದ ಶಾಸಕ ಮಂಜುನಾಥ್‌

ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…

24 mins ago

ನ್ಯೂಯಾರ್ಕ್‌ | ಲ್ಯಾಂಡಿಂಗ್‌ ವೇಳೆ ಟ್ರಕ್‌ಗೆ ವಿಮಾನ ಡಿಕ್ಕಿ : ಇಬ್ಬರು ಸಾವು

ನ್ಯೂಯಾರ್ಕ್‌ : ಲ್ಯಾಂಡಿಂಗ್‌ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…

28 mins ago

IPL | ಮೊದಲ ಪಂದ್ಯದಲ್ಲಿ ಆರ್‌ಸಿಬಿ-ಎಸ್‌ಆರ್‌ಎಚ್‌ ಮುಖಾಮುಖಿ

ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…

46 mins ago

ಹೆಚ್ಚುವರಿಯಾಗಿ 1 ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ; ನೋಂದಣಿ ಕಡ್ಡಾಯ : ಸಚಿವ ಮುನಿಯಪ್ಪ

ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್‌ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…

49 mins ago

ಮಾಂದಲಪಟ್ಟಿಯಲ್ಲಿ ಮುಂದುವರಿದ ರಸ್ತೆ ದುರಸ್ತಿ ಕಾರ್ಯ

ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…

2 hours ago