ಮೈಸೂರು: ಈ ಆದರೆ ಪ್ರತಾಪ್ ಸಿಂಹಗೆ ಟಿಕೆಟ್ ಸಿಗದ ಕಾರಣ, ಒಕ್ಕಲಿಗರು ಕಾಂಗ್ರೆಸ್ ಗೆ ಬೆಂಬಲ ಘೋಷಿಸಿದ್ದಾರೆ. ಈ ಬಾರಿ ನಾವೂ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಅವರನ್ನು ಬೆಂಬಲಿಸುತ್ತೇವೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಮರಿಸ್ವಾಮಿ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಎಂಬ ಕಾರಣಕ್ಕೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ. ಲಕ್ಷ್ಮಣ್ ಅವರು ಒಕ್ಕಲಿಗರಲ್ಲ ಎಂದು ಕೆಲವರು ಆರೋಪ ಮಾಡಿದರು. ಲಕ್ಷ್ಮಣ್ ಅವರು ಒಕ್ಕಲಿಗರೇ. ಅವರು ಒಕ್ಕಲಿಗರ ಸಂಘದಿಂದ ಸ್ಪರ್ಧೆ ಮಾಡಿದ್ದಾರೆ.
ಬಿಜೆಪಿ ಒಕ್ಕಲಿಗರನ್ನು ತುಳಿಯುವ ಕೆಲಸ ಮಾಡಲಾಗುತ್ತಿದೆ. ಹೀಗಾಗಿಯೇ ನಾವೂ ಲಕ್ಷ್ಮಣ್ ಅವರಿಗೆ ಬೆಂಬಲ ನೀಡುತ್ತಿದ್ದೇವೆ. ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿ ಎಂದು ಬೆಂಬಲಿಸುತ್ತಿಲ್ಲ. ಪ್ರತ್ಯೇಕ ಅಗಿ ಬೆಂಬಲ ನೀಡಿದ್ದೇವೆ ಎಂದಿದ್ದಾರೆ.
ಮೈಸೂರಿನಲ್ಲಿ ಇತ್ತಿಚೆಗೆ ನಡೆದ ಪ್ರಚಾರ ಕಾರ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಒಕ್ಕಲಿಗ ಎಂಬ ಕಾರ್ಡ್ ಪ್ರದರ್ಶಿಸಿದರು. ಲಕ್ಷ್ಮಣ್ ಅವರನ್ನು ಒಕ್ಕಲಿಗ ಎಂಬುದನ್ನು ಬಿಂಬಿಸಿದರು. ಪ್ರಚಾರದ ನಡುವೆ ಅದನ್ನೇ ಒತ್ತಿ ಒತ್ತಿ ಹೇಳಿದರು.
ಆದರೆ ಇದಕ್ಕೆ ವಿರುದ್ಧವಾಗಿ ಬಿಜೆಪಿ ನಾಯಕರು ಲಕ್ಷ್ಮಣ್ ಒಕ್ಕಲಿಗನಲ್ಲ ಎಂಬುದನ್ನು ಸಾಬೀತು ಮಾಡಲು ಪ್ರಯತ್ನಿಸಿದರು. ಇದೀಗ ಸಿದ್ದರಾಮಯ್ಯ ಚಲಾಯಿಸಿದ ಕಾರ್ಡ್ ಸಕ್ಸಸ್ ಆಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…