ಮೈಸೂರು: ವಾಲ್ಮೀಕಿ ನಿಗಮ ಹಾಗೂ ಮೈಸೂರು ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಇದನ್ನು ಮುಚ್ಚಿಹಾಕಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರಾಜಕೀಯ ನಾಟಕ ಆಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.
ಮೈಸೂರು ಮುಡಾದಲ್ಲಿ ಬೇಲಿಯೇ ಎದ್ದು ಹೊಲ ಮೇದಂತಾಗಿದೆ. ಸಿಎಂ ಮೂಗಿನಡಿ ಸಾವಿರಾರು ಕೋಟಿ ಬೆಲೆ ಬಾಳುವ ಮುಡಾ ಆಸ್ತಿ ಕಳ್ಳರ ಪಾಲಾಗಿದೆ. 69ನೇ ಇಸವಿಯಲ್ಲಿ ಭೂಮಿ ಕಳೆದುಕೊಂಡವರು ಇವತ್ತಿಗೆ ಜ್ಞಾನೋದಯವಾಗಿ ಅರ್ಜಿ ಕೊಟ್ಟಿದ್ದಾರಂತೆ. ಮುಡಾದವರು ಲಕ್ಷ ಲಕ್ಷ ಅಡಿಯನ್ನು ಬಿಟ್ಟು ಕೊಟ್ಟಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಗಿದೆ ಎಂಬುದರ ಬಗ್ಗೆ ಬಿಜೆಪಿ ಸಮಗ್ರ ಮಾಹಿತಿ ಕಲೆ ಹಾಕುತ್ತಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸಮಗ್ರ ತನಿಖೆಯಾಗಬೇಕು. ಯಾರೇ ಈ ಪ್ರಕರಣದಲ್ಲಿದ್ದರೂ ಅವರ ತಲೆದಂಡ ಆಗಬೇಕು. ಬಡವರಿಗೆ, ದಲಿತರಿಗೆ ಜಾಗ ಕೊಡಲು ಆಗುವುದಿಲ್ಲ. ಲೂಟಿ ಕೋರರಿಗೆ ಜಾಗ ಕೊಡುತ್ತಿದ್ದಾರೆ. ಈ ಸರ್ಕಾರ ಬಂದ ಮೇಲೆ ಎಲ್ಲಾ ದರಗಳು ಹೆಚ್ಚಾಗಿವೆ. ವಾಲ್ಮೀಕಿ ನಿಗಮದ ಹಣ ಎಲ್ಲೆಲ್ಲಿಗೆ ಹೋಗಿದೆ. ಬೇರೆ ರಾಜ್ಯದ ಚುನಾವಣೆಗೆ ಎಷ್ಟು ಹಣ ಕೊಟ್ಟಿದ್ದಾರೆ, ಇವೆಲ್ಲವೂ ಸಮಗ್ರವಾಗಿ ಬಹಿರಂಗ ಆಗಬೇಕು ಎಂದು ಆಗ್ರಹಿಸಿದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…