ಮೈಸೂರು

ಬೆಟ್ಟದ ತಾಯಿಗೆ ವರ್ಧಂತಿ ಸಂಭ್ರಮ : ಚಿನ್ನದ ಪಲ್ಲಕ್ಕಿಯಲ್ಲಿ ಕಂಗೊಳಿಸಿದ ನಾಡದೇವಿ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ.
ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಯುವರಾಣಿ ತ್ರಿಶಿಕಾ ಕುಮಾರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು.ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು.

ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡು, ಪುನೀತರಾದರು. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಧಾನ ಅರ್ಚಕ ಶಶಿ ಶೇಖರ್ ದೀಕ್ಷಿತ್ ಮಾತನಾಡಿ, ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ. ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನಡೆಯುವುದೂ ಒಂದು ವಿಶೇಷ. ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ. ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ. ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ. 9.30 ಕ್ಕೆ ಮಹಾ ಮಂಗಳಾರತಿ, 10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ. ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ. 8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ವಾಹನಗಳಿಗೆ ನಿಷೇಧಿಸಲಾಗಿದ್ದು, ಸಾರ್ವಜನಿಕರನ್ನು ಬೆಟ್ಟದ ಮೇಲೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಟ್ಟದ ಪಾದದ ಹೆಲಿಪ್ಯಾಡ್ ನಿಂದ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಚಾಮುಂಡೇಶ್ವರಿ ದಾಸೋಹ ಭವನದಲ್ಲಿ ನಿರಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

lokesh

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

6 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

6 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

6 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

7 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

7 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

7 hours ago