ಮೈಸೂರು

ಬೆಟ್ಟದ ತಾಯಿಗೆ ವರ್ಧಂತಿ ಸಂಭ್ರಮ : ಚಿನ್ನದ ಪಲ್ಲಕ್ಕಿಯಲ್ಲಿ ಕಂಗೊಳಿಸಿದ ನಾಡದೇವಿ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ.
ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಯುವರಾಣಿ ತ್ರಿಶಿಕಾ ಕುಮಾರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು.ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು.

ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡು, ಪುನೀತರಾದರು. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಧಾನ ಅರ್ಚಕ ಶಶಿ ಶೇಖರ್ ದೀಕ್ಷಿತ್ ಮಾತನಾಡಿ, ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ. ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನಡೆಯುವುದೂ ಒಂದು ವಿಶೇಷ. ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ. ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ. ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ. 9.30 ಕ್ಕೆ ಮಹಾ ಮಂಗಳಾರತಿ, 10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ. ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ. 8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ವಾಹನಗಳಿಗೆ ನಿಷೇಧಿಸಲಾಗಿದ್ದು, ಸಾರ್ವಜನಿಕರನ್ನು ಬೆಟ್ಟದ ಮೇಲೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಟ್ಟದ ಪಾದದ ಹೆಲಿಪ್ಯಾಡ್ ನಿಂದ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಚಾಮುಂಡೇಶ್ವರಿ ದಾಸೋಹ ಭವನದಲ್ಲಿ ನಿರಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

lokesh

Recent Posts

ಹಾಡುಪಾಡು | ಜೈಫುಲ್ ಮೇಷ್ಟ್ರ ಕಷ್ಟಕ್ಕೆ ಮಿಡಿಯುತ್ತಿರುವ ಶಿಷ್ಯ ಹೃದಯಗಳು

ಗುರುವಿಗೆ ಕೃತಜ್ಞತೆ ಸಲ್ಲಿಸುವ ಶಿಷ್ಯರ ಈ ಕಾರ್ಯ ಯುವ ಪೀಳಿಗೆಗೆ ಮಾದರಿಯಾಗಿದೆ. ಚಂದ್ರಶೇಖರ್ ಮೂರ್ತಿ ಕೆ.ಎಸ್. ಹಾರ್ಮೋನಿಯಂ ವಾದಕ, ಗೀತ…

29 mins ago

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

11 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

14 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

15 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

16 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

16 hours ago