ಮೈಸೂರು

ಬೆಟ್ಟದ ತಾಯಿಗೆ ವರ್ಧಂತಿ ಸಂಭ್ರಮ : ಚಿನ್ನದ ಪಲ್ಲಕ್ಕಿಯಲ್ಲಿ ಕಂಗೊಳಿಸಿದ ನಾಡದೇವಿ

ಮೈಸೂರು : ಚಾಮುಂಡಿ ಬೆಟ್ಟದಲ್ಲಿ ನೆಲೆ ನಿಂತಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆಗಳು ನಡೆಯುತ್ತಿವೆ.
ದೇವಿಗೆ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಸಹಸ್ರನಾಮಾರ್ಚನೆ ಸೇರಿದಂತೆ ಇತರ ಪೂಜಾ ಕೈಂಕರ್ಯಗಳು ನಡೆದಿವೆ. ಸಂಪ್ರದಾಯದಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ನಾಡ ಅಧಿದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಗಿದೆ.

ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಯುವರಾಣಿ ತ್ರಿಶಿಕಾ ಕುಮಾರಿ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಪೂಜೆಯಲ್ಲಿ ಭಾಗಿಯಾಗಿದ್ದರು.ಚಿನ್ನದ ಪಲ್ಲಕ್ಕಿಯಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಯಿತು. ಈ ವೇಳೆ 21 ಕುಶಾಲತೋಪು ಸಿಡಿಸುವ ಮೂಲಕ ತಾಯಿಗೆ ಗೌರವ ಅರ್ಪಿಸಲಾಯಿತು.

ಬ್ಯಾಂಡ್, ಮಂಗಳವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಸಹಸ್ರಾರು ಭಕ್ತರು ಪಾಲ್ಗೊಂಡು ವೈಭವವನ್ನು ಕಣ್ತುಂಬಿಸಿಕೊಂಡು, ಪುನೀತರಾದರು. ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಪ್ರಧಾನ ಅರ್ಚಕ ಶಶಿ ಶೇಖರ್ ದೀಕ್ಷಿತ್ ಮಾತನಾಡಿ, ವರ್ದಂತಿ ಉತ್ಸವ ಎನ್ನುವುದು ಬಹಳ ವಿಶೇಷ ಉತ್ಸವ. ಪುರಾಣ ಪ್ರಸಿದ್ಧ ದೇವಾಲಯದಲ್ಲಿ ವರ್ದಂತಿ ಉತ್ಸವ ನಡೆಯುವುದೂ ಒಂದು ವಿಶೇಷ. ಸಂಸ್ಕೃತದಲ್ಲಿ ವರ್ದಂತಿ ಎನ್ನುತ್ತಾರೆ. ಕನ್ನಡದಲ್ಲಿ ಹುಟ್ಟುಹಬ್ಬ ಎನ್ನುತಾರೆ. ಅಮ್ಮನವರ ಹುಟ್ಟುಹಬ್ಬದ ದಿನದಂದು ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಎಂದಿನಂತೆ ಬೆಳಗಿನ ಜಾವ 4.30 ರಿಂದ ಅಭ್ಯುಂಜನ ಸ್ನಾನ, ಪಂಚಾಮೃತ ಅಭಿಷೇಕ ನಡೆದಿದೆ. 9.30 ಕ್ಕೆ ಮಹಾ ಮಂಗಳಾರತಿ, 10.30 ಕ್ಕೆ ರಾಜವಂಶಸ್ಥರು ಚಿನ್ನದ ಪಲ್ಲಕ್ಕಿಗೆ ಚಾಲನೆ ಕೊಡುತ್ತಾರೆ. ಸಂಜೆ 6.30 ಯಿಂದ 7.30 ರವರೆಗೆ ಅಭಿಷೇಕ ಇರುತ್ತದೆ. 8.30 ಕ್ಕೆ ಮಹಾರಾಜರ ದರ್ಬಾರ್ ಉತ್ಸವ ಇರುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರತೀತಿ ಎಂದು ಮಾಹಿತಿ ನೀಡಿದರು.

ಸಾರ್ವಜನಿಕರ ವಾಹನಗಳಿಗೆ ನಿಷೇಧಿಸಲಾಗಿದ್ದು, ಸಾರ್ವಜನಿಕರನ್ನು ಬೆಟ್ಟದ ಮೇಲೆ ಕರೆದೊಯ್ಯಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಬೆಟ್ಟದ ಪಾದದ ಹೆಲಿಪ್ಯಾಡ್ ನಿಂದ ಸಾರಿಗೆ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಭಕ್ತರಿಗೆ ಚಾಮುಂಡೇಶ್ವರಿ ದಾಸೋಹ ಭವನದಲ್ಲಿ ನಿರಂತರ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.

lokesh

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

7 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

8 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

9 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

9 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

9 hours ago