ಮೈಸೂರು: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಆಚರಣೆ ಶನಿವಾರ (ಜು.27) ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಅದ್ಧೂರಿಯಾಗಿ ನೆರವೇರಿತು.
ತಾಯಿ ಚಾಮುಂಡೇಶ್ವರಿ ದರ್ಶನಕ್ಕೆ ರಾಜ್ಯದ ಹಲವು ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ತಾಯಿಯ ಕೃಪೆಗೆ ಪಾತ್ರರಾದರು. ವರ್ಧಂತಿ ಪ್ರಯುಕ್ತ ದೇವಿಗೆ ನಾಗಲಕ್ಷ್ಮೀ ಅಲಂಕಾರ ಮಾಡಲಾಗಿತ್ತು.
ಇಂದು ಬೆಳಿಗ್ಗೆಯಿಂದಲೇ ತಾಯಿ ಚಾಮುಂಡಿ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ರುದ್ರಾಭಿಷೇಕ, ಪಂಚಾಮೃತಾಭಿಷೇಕ ಸೇರಿದಂತೆ ಹಲವು ವಿಶೇಷ ಪೂಜಾ ಕೈಕಂರ್ಯಗಳು ನಡೆದವು.
ದೇವಾಲಯವನ್ನು ವಿವಿಧ ಹೂವುಗಳಿಂದ ಅಲಂಕರಿಸಲಾಗಿದ್ದು, ಚಾಮುಂಡಿ ದರ್ಶನ ಪಡೆದು ಭಕ್ತರು ಪುನೀತರಾದರು.
ಇನ್ನು ಚಾಮುಂಡಿ ತಾಯಿಯ ಪಲ್ಲಕ್ಕಿ ಉತ್ಸವಕ್ಕೆ ರಾಜಾಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ರಾಜಮಾತಾ ಪ್ರಮೋದಾದೇವಿ ಒಡೆಯರ್ ಅವರು ಚಾಲನೆ ನೀಡಿದರು. ಇದೇ ದಿನ ರಾತ್ರಿ 8 ಗಂಟೆಗೆ ಅರಮನೆ ಮಾದರಿಯ ದರ್ಬಾರ್ ಉತ್ಸವ ಚಾಮುಂಡಿ ತಾಯಿಗೂ ನಡೆಯಲಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…