ಮೈಸೂರು

ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಉತ್ಸವಕ್ಕೆ ಚಾಲನೆ

ಮೈಸೂರು : ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಮೂಲಕ ಚಾಮುಂಡೇಶ್ವರಿ ವರ್ಧಂತಿ ಸಂಭ್ರಮದಿಂದ ನೆರವೇರಿತು. ವರ್ಧಂತಿಗೆ ರಾಜವಂಶಸ್ಥರು ಚಾಲನೆ ನೀಡಿದರು.

ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ವರ್ಧಂತಿಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್‌ ಸ್ಥಾಪನೆ ಮಾಡಿದ್ದರು. ಹೀಗಾಗಿ ಅಂದಿನಿಂದ ಈ ದಿನವನ್ನು ಚಾಮಂಡೇಶ್ವರಿ ವರ್ಧಂತಿ ದಿನ ಎಂದು ಆಚರಿಸಿಕೊಂಡ ಬರಲಾಗಿದೆ.

ಈ ದಿನ ಮಾತ್ರ ಚಾಮುಂಡಿಗೆ ಚಾಮುಂಡಿ ಅಲಂಕಾರ ಮಾಡುವುದು ವಿಶೇಷ. ಮುಖ್ಯವಾಗಿ ಚಾಮುಂಡೇಶ್ವರಿಯ ಮೂಲ ಮೂರ್ತಿಗೆ ಈ ಅಲಂಕಾರ ಮಾಡುವುದು ವರ್ಧಂತಿ ದಿನದ ವಿಶೇಷ.

ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಿದ ಈ ದಿನವನ್ನು ಚಾಮುಂಡೇಶ್ವರಿ ವರ್ಧಂತಿ ಉತ್ಸವ ಎಂದು ಆಚರಣೆ ಮಾಡುತ್ತೇವೆ. ಇಂದು ದೇವಸ್ಥಾನದಲ್ಲಿ ಬೆಳಗ್ಗೆ ಅಭ್ಯಂಜನ ಸ್ನಾನ ಮಾಡಿಸಿ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಂತರ ತಾಯಿಗೆ ಅವರ ಹುಟ್ಟುಹಬ್ಬದ ಈ ದಿನ ಚಾಮುಂಡೇಶ್ವರಿ ಅಲಂಕಾರ ಮಾಡಲಾಗಿದೆ. ನಂತರ 9.30ಕ್ಕೆ ಮಹಾ ಮಂಗಳಾರತಿಯ ನಂತರ ರಾಜವಂಶಸ್ಥರು ವರ್ಧಂತಿ ಉತ್ಸವಕ್ಕೆ ಚಾಲನೆ ನೀಡುವರು. ಬಳಿಕ ದೇವಸ್ಥಾನದ ಸುತ್ತ ಉತ್ಸವ ಮೂರ್ತಿಯ ಉತ್ಸವ ನಡೆದ ಬಳಿಕ ರಾತ್ರಿ ದರ್ಬಾರ್‌ ಉತ್ಸವ ಮಾಡುವ ಮೂಲಕ ವರ್ಧಂತಿಯ ಧಾರ್ಮಿಕ ಆಚರಣೆ ಮುಕ್ತಾಯ ಆಗಲಿದೆ’ ಎನ್ನುತ್ತಾರೆ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್ ಅವರು.

ಆಂದೋಲನ ಡೆಸ್ಕ್

Recent Posts

IND vs SA | ಹರಿಣಗಳ ಬೌಲಿಂಗ್‌ ದಾಳಿಗೆ ತತ್ತರಿಸಿದ ಇಂಡಿಯಾ ; 76 ರನ್‌ಗಳ ಸೋಲು

ಕೋಲ್ಕತ್ತಾ : ಟಿ20 ವಿಶ್ವಕಪ್​​ನ ಸೂಪರ್​ 8 ಪಂದ್ಯದಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ…

5 hours ago

ಈ ಭಾರಿ ವಾಡಿಕೆಗಿಂತ ಹೆಚ್ಚು ಬಿಸಿಲು ; ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು : ಈ ವರ್ಷ ರಾಜ್ಯದಲ್ಲಿ ಬೇಸಿಗೆಯ ಬಿಸಿಲು ಸಾಮಾನ್ಯಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…

8 hours ago

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅರ್ಜಿ ವಜಾ

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ…

8 hours ago

HPCLನಲ್ಲಿ 608 ಅಪ್ರೆಂಟಿಸ್ ಟ್ರೈನಿ ನೇಮಕಾತಿ

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು…

8 hours ago

ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆದು ; ಮೂವರು ಶಾಸಕರಿಗೆ ಡಿಸಿಎಂ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು…

8 hours ago

ದಿಲ್ಲಿಯಲ್ಲಿ ದಾಳಿಗೆ ಸಂಚು : 8 ಮಂದಿ ಬಂಧನ

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ…

10 hours ago