ಮೈಸೂರು

ಚಾಮುಂಡಿ ಬೆಟ್ಟದಲ್ಲಿ ವರ್ಧಂತಿ ಉತ್ಸವಕ್ಕೆ ಚಾಲನೆ

ಮೈಸೂರು : ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಮೂಲಕ ಚಾಮುಂಡೇಶ್ವರಿ ವರ್ಧಂತಿ ಸಂಭ್ರಮದಿಂದ ನೆರವೇರಿತು. ವರ್ಧಂತಿಗೆ ರಾಜವಂಶಸ್ಥರು ಚಾಲನೆ ನೀಡಿದರು.

ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ವರ್ಧಂತಿಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್‌ ಸ್ಥಾಪನೆ ಮಾಡಿದ್ದರು. ಹೀಗಾಗಿ ಅಂದಿನಿಂದ ಈ ದಿನವನ್ನು ಚಾಮಂಡೇಶ್ವರಿ ವರ್ಧಂತಿ ದಿನ ಎಂದು ಆಚರಿಸಿಕೊಂಡ ಬರಲಾಗಿದೆ.

ಈ ದಿನ ಮಾತ್ರ ಚಾಮುಂಡಿಗೆ ಚಾಮುಂಡಿ ಅಲಂಕಾರ ಮಾಡುವುದು ವಿಶೇಷ. ಮುಖ್ಯವಾಗಿ ಚಾಮುಂಡೇಶ್ವರಿಯ ಮೂಲ ಮೂರ್ತಿಗೆ ಈ ಅಲಂಕಾರ ಮಾಡುವುದು ವರ್ಧಂತಿ ದಿನದ ವಿಶೇಷ.

ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಿದ ಈ ದಿನವನ್ನು ಚಾಮುಂಡೇಶ್ವರಿ ವರ್ಧಂತಿ ಉತ್ಸವ ಎಂದು ಆಚರಣೆ ಮಾಡುತ್ತೇವೆ. ಇಂದು ದೇವಸ್ಥಾನದಲ್ಲಿ ಬೆಳಗ್ಗೆ ಅಭ್ಯಂಜನ ಸ್ನಾನ ಮಾಡಿಸಿ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಂತರ ತಾಯಿಗೆ ಅವರ ಹುಟ್ಟುಹಬ್ಬದ ಈ ದಿನ ಚಾಮುಂಡೇಶ್ವರಿ ಅಲಂಕಾರ ಮಾಡಲಾಗಿದೆ. ನಂತರ 9.30ಕ್ಕೆ ಮಹಾ ಮಂಗಳಾರತಿಯ ನಂತರ ರಾಜವಂಶಸ್ಥರು ವರ್ಧಂತಿ ಉತ್ಸವಕ್ಕೆ ಚಾಲನೆ ನೀಡುವರು. ಬಳಿಕ ದೇವಸ್ಥಾನದ ಸುತ್ತ ಉತ್ಸವ ಮೂರ್ತಿಯ ಉತ್ಸವ ನಡೆದ ಬಳಿಕ ರಾತ್ರಿ ದರ್ಬಾರ್‌ ಉತ್ಸವ ಮಾಡುವ ಮೂಲಕ ವರ್ಧಂತಿಯ ಧಾರ್ಮಿಕ ಆಚರಣೆ ಮುಕ್ತಾಯ ಆಗಲಿದೆ’ ಎನ್ನುತ್ತಾರೆ ಪ್ರಧಾನ ಅರ್ಚಕ ಶಶಿಶೇಖರ್‌ ದೀಕ್ಷಿತ್ ಅವರು.

ಆಂದೋಲನ ಡೆಸ್ಕ್

Recent Posts

ಕಾರವಾರದ ಕದಂಬ ನೌಕನೆಲೆಗೆ ರಾಷ್ಟ್ರಪತಿ ಭೇಟಿ ನಾಳೆ

ಬೆಂಗಳೂರು‌ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಏಷ್ಯಾದ ಅತಿದೊಡ್ಡ ನೌಕಾನೆಲೆ ಐಎನ್…

33 mins ago

ಲೋಕ್ ಅದಾಲತ್‌ನಲ್ಲಿ 14,850 ಪ್ರಕರಣ ಇತ್ಯರ್ಥ : ಒಂದಾದ ಕೌಟುಂಬಿಕ ಕಲಹದಿಂದ ಬೇರ್ಪಟ್ಟಿದ್ದ 6 ದಂಪತಿಗಳು

ಮಡಿಕೇರಿ : ಕೊಡಗು ಜಿಲ್ಲೆಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ಒಟ್ಟು 14,850 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ,…

52 mins ago

ಜ.5ರಿಂದ ಉದ್ಯೋಗ ಖಾತ್ರಿ ಯೋಜನೆ ಬಚಾವ್‌ ಆಂದೋಲನ : ಸಿಎಂ

ಹೊಸದಿಲ್ಲಿ : ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ_ ಜಿ ರಾಮ್ _ ಜಿ ಎಂದು…

1 hour ago

ಇನ್ಮುಂದೆ ಭೀಮನ ಹತ್ತಿರ ಹೋಗಿ ವೀಡಿಯೋ, ಫೋಟೋ ತೆಗೆದರೆ ಬೀಳುತ್ತೆ ಕೇಸ್‌

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…

3 hours ago

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

3 hours ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

4 hours ago