Strict action at Chamundi Hill: Reels and videos will no longer be allowed
ಮೈಸೂರು : ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಮೂಲಕ ಚಾಮುಂಡೇಶ್ವರಿ ವರ್ಧಂತಿ ಸಂಭ್ರಮದಿಂದ ನೆರವೇರಿತು. ವರ್ಧಂತಿಗೆ ರಾಜವಂಶಸ್ಥರು ಚಾಲನೆ ನೀಡಿದರು.
ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ವರ್ಧಂತಿಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್ ಸ್ಥಾಪನೆ ಮಾಡಿದ್ದರು. ಹೀಗಾಗಿ ಅಂದಿನಿಂದ ಈ ದಿನವನ್ನು ಚಾಮಂಡೇಶ್ವರಿ ವರ್ಧಂತಿ ದಿನ ಎಂದು ಆಚರಿಸಿಕೊಂಡ ಬರಲಾಗಿದೆ.
ಈ ದಿನ ಮಾತ್ರ ಚಾಮುಂಡಿಗೆ ಚಾಮುಂಡಿ ಅಲಂಕಾರ ಮಾಡುವುದು ವಿಶೇಷ. ಮುಖ್ಯವಾಗಿ ಚಾಮುಂಡೇಶ್ವರಿಯ ಮೂಲ ಮೂರ್ತಿಗೆ ಈ ಅಲಂಕಾರ ಮಾಡುವುದು ವರ್ಧಂತಿ ದಿನದ ವಿಶೇಷ.
ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಿದ ಈ ದಿನವನ್ನು ಚಾಮುಂಡೇಶ್ವರಿ ವರ್ಧಂತಿ ಉತ್ಸವ ಎಂದು ಆಚರಣೆ ಮಾಡುತ್ತೇವೆ. ಇಂದು ದೇವಸ್ಥಾನದಲ್ಲಿ ಬೆಳಗ್ಗೆ ಅಭ್ಯಂಜನ ಸ್ನಾನ ಮಾಡಿಸಿ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಂತರ ತಾಯಿಗೆ ಅವರ ಹುಟ್ಟುಹಬ್ಬದ ಈ ದಿನ ಚಾಮುಂಡೇಶ್ವರಿ ಅಲಂಕಾರ ಮಾಡಲಾಗಿದೆ. ನಂತರ 9.30ಕ್ಕೆ ಮಹಾ ಮಂಗಳಾರತಿಯ ನಂತರ ರಾಜವಂಶಸ್ಥರು ವರ್ಧಂತಿ ಉತ್ಸವಕ್ಕೆ ಚಾಲನೆ ನೀಡುವರು. ಬಳಿಕ ದೇವಸ್ಥಾನದ ಸುತ್ತ ಉತ್ಸವ ಮೂರ್ತಿಯ ಉತ್ಸವ ನಡೆದ ಬಳಿಕ ರಾತ್ರಿ ದರ್ಬಾರ್ ಉತ್ಸವ ಮಾಡುವ ಮೂಲಕ ವರ್ಧಂತಿಯ ಧಾರ್ಮಿಕ ಆಚರಣೆ ಮುಕ್ತಾಯ ಆಗಲಿದೆ’ ಎನ್ನುತ್ತಾರೆ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರು.
ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗ (ಕೆಪಿಎಸ್ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್…
ಚೆಟ್ಟಳ್ಳಿ: ಕೊಡಗು ಜಿಲ್ಲೆಯಾದ್ಯಂತ ಕೈಲ್ ಪೊಳ್ದ್ ನಮ್ಮೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಚೆಟ್ಟಳ್ಳಿಯ ಪುತ್ತರಿರ ಐನ್ ಮನೆಯಲ್ಲಿ ಕೊಡವ ಸಂಪ್ರದಾಯ, ಕುಟುಂಬದ…
ಬೆಂಗಳೂರು : ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರಗಾಲದ ಪರಿಸ್ಥಿತಿ, ಕಸ್ತೂರಿ ರಂಗನ್ ವರದಿ ಹಾಗೂ ಇತ್ಯಾದಿ ಪ್ರಮುಖ ಜನಪರ ವಿಷಯಗಳ…
ಮಂಡ್ಯ: ಕೆಆರ್ಎಸ್ ಜಲಾಶಯದಿಂದ ತಮಿಳುನಾಡಿಗೆ ಒಳಹರಿವಿಗಿಂತ ಮೂರು ಪಟ್ಟು ಅಧಿಕ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಮಳೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದ ಹೊಳೆಮುರಿದಟ್ಟಿ ಕರಿಕಲ್ಲುಗುಡ್ಡದಲ್ಲಿ ಅರಣ್ಯಾಧಿಕಾರಿಗಳ ಮೇಲೆ ಗುಂಡಿನ ದಾಳಿ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯಲ್ಲಿ ಚರಂಡಿ, ಪಾದಚಾರಿಮಾರ್ಗ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಸಿದ್ದಲಿಂಗೇಶ್ವರ ಅಂಗಡಿ ಬಳಿ ವಿದ್ಯುತ್…