Strict action at Chamundi Hill: Reels and videos will no longer be allowed
ಮೈಸೂರು : ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡುವ ಮೂಲಕ ಚಾಮುಂಡೇಶ್ವರಿ ವರ್ಧಂತಿ ಸಂಭ್ರಮದಿಂದ ನೆರವೇರಿತು. ವರ್ಧಂತಿಗೆ ರಾಜವಂಶಸ್ಥರು ಚಾಲನೆ ನೀಡಿದರು.
ಆಷಾಢ ಮಾಸದ ಕೃಷ್ಣ ಪಕ್ಷದ ರೇವತಿ ನಕ್ಷತ್ರದಲ್ಲಿ ವರ್ಧಂತಿಗೆ ಚಾಲನೆ ನೀಡಲಾಯಿತು. ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಮುಮ್ಮಡಿ ಕೃಷ್ಣರಾಜ ಒಡೆಯರ್ ಸ್ಥಾಪನೆ ಮಾಡಿದ್ದರು. ಹೀಗಾಗಿ ಅಂದಿನಿಂದ ಈ ದಿನವನ್ನು ಚಾಮಂಡೇಶ್ವರಿ ವರ್ಧಂತಿ ದಿನ ಎಂದು ಆಚರಿಸಿಕೊಂಡ ಬರಲಾಗಿದೆ.
ಈ ದಿನ ಮಾತ್ರ ಚಾಮುಂಡಿಗೆ ಚಾಮುಂಡಿ ಅಲಂಕಾರ ಮಾಡುವುದು ವಿಶೇಷ. ಮುಖ್ಯವಾಗಿ ಚಾಮುಂಡೇಶ್ವರಿಯ ಮೂಲ ಮೂರ್ತಿಗೆ ಈ ಅಲಂಕಾರ ಮಾಡುವುದು ವರ್ಧಂತಿ ದಿನದ ವಿಶೇಷ.
ಚಾಮುಂಡೇಶ್ವರಿಯನ್ನು ಸ್ಥಾಪನೆ ಮಾಡಿದ ಈ ದಿನವನ್ನು ಚಾಮುಂಡೇಶ್ವರಿ ವರ್ಧಂತಿ ಉತ್ಸವ ಎಂದು ಆಚರಣೆ ಮಾಡುತ್ತೇವೆ. ಇಂದು ದೇವಸ್ಥಾನದಲ್ಲಿ ಬೆಳಗ್ಗೆ ಅಭ್ಯಂಜನ ಸ್ನಾನ ಮಾಡಿಸಿ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ನಂತರ ತಾಯಿಗೆ ಅವರ ಹುಟ್ಟುಹಬ್ಬದ ಈ ದಿನ ಚಾಮುಂಡೇಶ್ವರಿ ಅಲಂಕಾರ ಮಾಡಲಾಗಿದೆ. ನಂತರ 9.30ಕ್ಕೆ ಮಹಾ ಮಂಗಳಾರತಿಯ ನಂತರ ರಾಜವಂಶಸ್ಥರು ವರ್ಧಂತಿ ಉತ್ಸವಕ್ಕೆ ಚಾಲನೆ ನೀಡುವರು. ಬಳಿಕ ದೇವಸ್ಥಾನದ ಸುತ್ತ ಉತ್ಸವ ಮೂರ್ತಿಯ ಉತ್ಸವ ನಡೆದ ಬಳಿಕ ರಾತ್ರಿ ದರ್ಬಾರ್ ಉತ್ಸವ ಮಾಡುವ ಮೂಲಕ ವರ್ಧಂತಿಯ ಧಾರ್ಮಿಕ ಆಚರಣೆ ಮುಕ್ತಾಯ ಆಗಲಿದೆ’ ಎನ್ನುತ್ತಾರೆ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಅವರು.
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…