ಮೈಸೂರು

ವರುಣಾ| ನಿಗದಿತ ಅವಧಿಯೊಳಗೆ ಅನುದಾನ ಬಳಸಿ; ಡಾ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು  ವಿಧಾನಸಭಾ ಪರಿಷತ್ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.

ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

ಕಳೆದ 2 ತಿಂಗಳ ಹಿಂದೆ ಮುಖ್ಯ ಮಂತ್ರಿಗಳು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 502 ಕೋಟಿ ಅನುದಾನದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದು ಸದರಿ ಕಾಮಗಾರಿಗಳನ್ನು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕೆಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟಾರೆ ರೂ.21.60 ಕೋಟಿಯಷ್ಟು ಕಾಮಗಾರಿಗಳು ವರುಣ ಕ್ಷೇತ್ರದಲ್ಲಿ ಪ್ರಗತಿಯಲ್ಲಿದ್ದು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಪೂರ್ಣಗಳಿಸಬೇಕು. ಗ್ರಾಮೀಣ ಕುಡಿಯುವ ನೀರು ಯೋಜನೆಯಿಂದ ತಾಂಡವಪುರ ಹಾಗೂ 31 ಗ್ರಾಮ ಸೇರಿದಂತೆ ಒಟ್ಟು ರೂ.123.30 ಕೋಟಿ ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದಲ್ಲಿ ಪೂರ್ಣಗೊಳಿಸಲು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮಗಳು ಸೇರಿದಂತೆ 35 ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರುಣ ಕ್ಷೇತ್ರದ 35 ಗ್ರಾಮ ಪಂಚಾಯತ್ PDO ಗಳಿಗೆ ವಸತಿ ಯೋಜನೆ, ನರೇಗಾ, ಕಂದಾಯ ವಸೂಲಿ ಹಾಗೂ ಇತರೆ ಯೋಜನೆಗಳ ಬಗ್ಗೆ ನಿಗದಿ ಪಡಿಸಿರುವ ಗುರಿಗೆ ಸಾಧನೆ ಮಾಡಿ ಪ್ರಗತಿ ಸಾಧಿಸಲು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ ಮಂತ್ರಿ+ಗಳ ವಿಶೇಷಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

51 mins ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

1 hour ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

2 hours ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

2 hours ago

ಓದುಗರ ಪತ್ರ | ಮದ್ಯಪ್ರಿಯರ ತಾಣವಾಗಿರುವ ಬಸ್ ತಂಗುದಾಣ

ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…

2 hours ago