ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರ ಮುಖ್ಯ ಮಂತ್ರಿಗಳ ಕ್ಷೇತ್ರವಾಗಿದ್ದು, ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ ಬಂದಿರುವ ಅನುದಾನವನ್ನು ನಿಗದಿತ ಅವಧಿಯಲ್ಲಿ ಬಳಕೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಬಳಕೆ ಮಾಡಬೇಕು ಎಂದು ವಿಧಾನಸಭಾ ಪರಿಷತ್ ಶಾಸಕರಾದ ಡಾ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.
ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.
ಕಳೆದ 2 ತಿಂಗಳ ಹಿಂದೆ ಮುಖ್ಯ ಮಂತ್ರಿಗಳು ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 502 ಕೋಟಿ ಅನುದಾನದಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮಾಡಿದ್ದು ಸದರಿ ಕಾಮಗಾರಿಗಳನ್ನು ನಿಗದಿತ ಅವಧಿ ಒಳಗೆ ಪೂರ್ಣಗೊಳಿಸಬೇಕೆಂದು ತಿಳಿಸಿದರು.
ಸಣ್ಣ ನೀರಾವರಿ ಇಲಾಖೆಯಿಂದ ಒಟ್ಟಾರೆ ರೂ.21.60 ಕೋಟಿಯಷ್ಟು ಕಾಮಗಾರಿಗಳು ವರುಣ ಕ್ಷೇತ್ರದಲ್ಲಿ ಪ್ರಗತಿಯಲ್ಲಿದ್ದು ಆದ್ಯತೆ ಮೇರೆಗೆ ಕಾಮಗಾರಿಗಳನ್ನು ಪೂರ್ಣಗಳಿಸಬೇಕು. ಗ್ರಾಮೀಣ ಕುಡಿಯುವ ನೀರು ಯೋಜನೆಯಿಂದ ತಾಂಡವಪುರ ಹಾಗೂ 31 ಗ್ರಾಮ ಸೇರಿದಂತೆ ಒಟ್ಟು ರೂ.123.30 ಕೋಟಿ ಅನುದಾನದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಗುಣಮಟ್ಟದಲ್ಲಿ ಪೂರ್ಣಗೊಳಿಸಲು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಕಾರ್ಯಕ್ರಮಗಳು ಸೇರಿದಂತೆ 35 ಇಲಾಖೆಗಳ ಪ್ರಗತಿ ವರದಿಗಳನ್ನು ಪರಿಶೀಲಿಸಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ವರುಣ ಕ್ಷೇತ್ರದ 35 ಗ್ರಾಮ ಪಂಚಾಯತ್ PDO ಗಳಿಗೆ ವಸತಿ ಯೋಜನೆ, ನರೇಗಾ, ಕಂದಾಯ ವಸೂಲಿ ಹಾಗೂ ಇತರೆ ಯೋಜನೆಗಳ ಬಗ್ಗೆ ನಿಗದಿ ಪಡಿಸಿರುವ ಗುರಿಗೆ ಸಾಧನೆ ಮಾಡಿ ಪ್ರಗತಿ ಸಾಧಿಸಲು ತಿಳಿಸಿದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಖ್ಯ ಮಂತ್ರಿ+ಗಳ ವಿಶೇಷಾಧಿಕಾರಿಗಳು, ಜಿಲ್ಲಾ ಪಂಚಾಯತ್ ಅಧಿಕಾರಿಗಳು ಹಾಜರಿದ್ದರು.
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…
ಪ್ರೊ.ಆರ್.ಎಂ.ಚಿಂತಾಮಣಿ ಇತ್ತೀಚೆಗೆ ಕೇಂದ್ರ ಸರ್ಕಾರದ ಹಿರಿಯ ಕಾರ್ಯದರ್ಶಿ ದರ್ಜೆಯ ಅಧಿಕಾರಿಯೊಬ್ಬರು ಒಂದು ವಿಚಾರಸಂಕಿರಣದಲ್ಲಿ ‘೨೦೪೭ರ ಹೊತ್ತಿಗೆ ವಿಕಸಿತ ಭಾರತವಾಗಬೇಕಾದರೆ ಮಹಿಳೆಯರಲ್ಲಿ…