ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ ಫಾರಂಗೆ 400 ವರ್ಷಗಳ ಇತಿಹಾಸ ಇದ್ದು, ಇಲ್ಲಿ ಯಾವುದೇ ಕಾರಣಕ್ಕೂ ನಗರ ನಿರ್ಮಾಣ ಮಾಡಬಾರದು.
ಆಂಗ್ಲರು, ಟಿಪ್ಪು ಸುಲ್ತಾನ್ ಮೈಸೂರು ಅರಸರ ಆಳ್ವಿಕೆ ನೆನಪಿಸುತ್ತದೆ. ಕುಣಿಗಲ್ ಫಾರಂಗೆ ವಿಶ್ವದ ಮಾನ್ಯತೆ ಇದೆ. ಇಂತಹ ಫಾರಂ ಉಳಿಸಿಕೊಳ್ಳುವುದು ಸರಕಾರದ ಆದ್ಯ ಕರ್ತವ್ಯ. ಕುಣಿಗಲ್ ಕುದುರೆ ಫಾರಂ ಅನ್ನು ವಿಶ್ವದ ಜನ ಬಂದು ನೋಡುವಂತಹ ಸ್ಮಾರಕವಾಗಿ ಮಾಡಬೇಕು ಎಂದು ಒತ್ತಾಯಿಸಿದರು.
1992ರಲ್ಲಿ ಮಲ್ಯನ ಯುಬಿ ಸಂಸ್ಥೆಗೆ ಕೊಟ್ಟಾಗ ನಾನು ವಿರೋಧ ಮಾಡಿದ್ದೆ. ಆದರೆ, ಪರಭಾರೆ ಮಾಡಲು ಭಾರಿ ಕರಾಮತ್ತು ಇದೆ. 100 ಎಕರೆ ಬೆಂಗಳೂರು ಟರ್ಫ್ ಕ್ಲಬ್ಗೆ ಹಾಗೂ 321 ಎಕರೆ ಟೌನ್ ಷಿಪ್ ಗೆ ಬಳಸುವ ಪ್ರಸ್ತಾಪ ಇದೆ.
ಈ ಬಗ್ಗೆ ಜ.16ರಂದು ಬೆಂಗಳೂರಿನಲ್ಲಿ ಕುಣಿಗಲ್ ಕುದುರೆ ಫಾರಂ ಉಳಿಸಿ ಎಂದು ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.
ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಹೆಗಡೆಯವರು ಎಂಪಿ ಆಗಿದ್ದಾರೆ. ನಾನು 65 ವರ್ಷಗಳ ರಾಜಕಾರಣದಲ್ಲಿ ನಿಜಲಿಂಗಪ್ಪ, ಜೆ.ಎಚ್.ಪಟೇಲ್, ಗುಂಡೂರಾವ್, ಬಂಗಾರಪ್ಪ, ರಾಮಕೃಷ್ಣ ಹೆಗಡೆ ಅವರಂತಹ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಯಾವ ರಾಜಕಾರಣಿಯೂ ಇಷ್ಟೊಂದು ಲಘುವಾಗಿ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಹಾಗೂ ದ್ವೇಷದಿಂದ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಪಮಾನವಲ್ಲ, ರಾಜ್ಯದ ಜನರಿಗೆ ಮಾಡಿದ ಅಪಮಾನ. ಟೀಕೆ ಮಾಡಿ, ಆದರೆ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಬಾರದು.
– ವಾಟಾಳ್ ನಾಗರಾಜ್
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…