ಮೈಸೂರು

ಕುಣಿಗಾಲ್ ಕುದುರೆ ಫಾರಂ ಪರಭಾರೆ ವಿರೋಧಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ!

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ ಫಾರಂಗೆ 400 ವರ್ಷಗಳ ಇತಿಹಾಸ ಇದ್ದು, ಇಲ್ಲಿ ಯಾವುದೇ ಕಾರಣಕ್ಕೂ ನಗರ ನಿರ್ಮಾಣ ಮಾಡಬಾರದು.

ಆಂಗ್ಲರು, ಟಿಪ್ಪು ಸುಲ್ತಾನ್ ಮೈಸೂರು ಅರಸರ ಆಳ್ವಿಕೆ ನೆನಪಿಸುತ್ತದೆ. ಕುಣಿಗಲ್ ಫಾರಂಗೆ ವಿಶ್ವದ ಮಾನ್ಯತೆ ಇದೆ. ಇಂತಹ ಫಾರಂ ಉಳಿಸಿಕೊಳ್ಳುವುದು ಸರಕಾರದ ಆದ್ಯ ಕರ್ತವ್ಯ. ಕುಣಿಗಲ್ ಕುದುರೆ ಫಾರಂ ಅನ್ನು ವಿಶ್ವದ ಜನ ಬಂದು ನೋಡುವಂತಹ ಸ್ಮಾರಕವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

1992ರಲ್ಲಿ ಮಲ್ಯನ ಯುಬಿ ಸಂಸ್ಥೆಗೆ ಕೊಟ್ಟಾಗ ನಾನು ವಿರೋಧ ಮಾಡಿದ್ದೆ. ಆದರೆ, ಪರಭಾರೆ ಮಾಡಲು ಭಾರಿ ಕರಾಮತ್ತು ಇದೆ. 100 ಎಕರೆ ಬೆಂಗಳೂರು ಟರ್ಫ್ ಕ್ಲಬ್‌ಗೆ ಹಾಗೂ 321 ಎಕರೆ ಟೌನ್‌ ಷಿಪ್‌ ಗೆ ಬಳಸುವ ಪ್ರಸ್ತಾಪ ಇದೆ.

ಈ ಬಗ್ಗೆ ಜ.16ರಂದು ಬೆಂಗಳೂರಿನಲ್ಲಿ ಕುಣಿಗಲ್ ಕುದುರೆ ಫಾರಂ ಉಳಿಸಿ ಎಂದು ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

 

ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಹೆಗಡೆಯವರು ಎಂಪಿ ಆಗಿದ್ದಾರೆ. ನಾನು 65 ವರ್ಷಗಳ ರಾಜಕಾರಣದಲ್ಲಿ ನಿಜಲಿಂಗಪ್ಪ, ಜೆ.ಎಚ್.ಪಟೇಲ್, ಗುಂಡೂರಾವ್, ಬಂಗಾರಪ್ಪ, ರಾಮಕೃಷ್ಣ ಹೆಗಡೆ ಅವರಂತಹ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಯಾವ ರಾಜಕಾರಣಿಯೂ ಇಷ್ಟೊಂದು ಲಘುವಾಗಿ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಹಾಗೂ ದ್ವೇಷದಿಂದ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಪಮಾನವಲ್ಲ, ರಾಜ್ಯದ ಜನರಿಗೆ ಮಾಡಿದ ಅಪಮಾನ. ಟೀಕೆ ಮಾಡಿ, ಆದರೆ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಬಾರದು.

– ವಾಟಾಳ್‌ ನಾಗರಾಜ್‌

 

andolanait

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

1 hour ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

2 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

3 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

3 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

4 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

5 hours ago