ಮೈಸೂರು

ಕುಣಿಗಾಲ್ ಕುದುರೆ ಫಾರಂ ಪರಭಾರೆ ವಿರೋಧಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ!

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ ಫಾರಂಗೆ 400 ವರ್ಷಗಳ ಇತಿಹಾಸ ಇದ್ದು, ಇಲ್ಲಿ ಯಾವುದೇ ಕಾರಣಕ್ಕೂ ನಗರ ನಿರ್ಮಾಣ ಮಾಡಬಾರದು.

ಆಂಗ್ಲರು, ಟಿಪ್ಪು ಸುಲ್ತಾನ್ ಮೈಸೂರು ಅರಸರ ಆಳ್ವಿಕೆ ನೆನಪಿಸುತ್ತದೆ. ಕುಣಿಗಲ್ ಫಾರಂಗೆ ವಿಶ್ವದ ಮಾನ್ಯತೆ ಇದೆ. ಇಂತಹ ಫಾರಂ ಉಳಿಸಿಕೊಳ್ಳುವುದು ಸರಕಾರದ ಆದ್ಯ ಕರ್ತವ್ಯ. ಕುಣಿಗಲ್ ಕುದುರೆ ಫಾರಂ ಅನ್ನು ವಿಶ್ವದ ಜನ ಬಂದು ನೋಡುವಂತಹ ಸ್ಮಾರಕವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

1992ರಲ್ಲಿ ಮಲ್ಯನ ಯುಬಿ ಸಂಸ್ಥೆಗೆ ಕೊಟ್ಟಾಗ ನಾನು ವಿರೋಧ ಮಾಡಿದ್ದೆ. ಆದರೆ, ಪರಭಾರೆ ಮಾಡಲು ಭಾರಿ ಕರಾಮತ್ತು ಇದೆ. 100 ಎಕರೆ ಬೆಂಗಳೂರು ಟರ್ಫ್ ಕ್ಲಬ್‌ಗೆ ಹಾಗೂ 321 ಎಕರೆ ಟೌನ್‌ ಷಿಪ್‌ ಗೆ ಬಳಸುವ ಪ್ರಸ್ತಾಪ ಇದೆ.

ಈ ಬಗ್ಗೆ ಜ.16ರಂದು ಬೆಂಗಳೂರಿನಲ್ಲಿ ಕುಣಿಗಲ್ ಕುದುರೆ ಫಾರಂ ಉಳಿಸಿ ಎಂದು ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

 

ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಹೆಗಡೆಯವರು ಎಂಪಿ ಆಗಿದ್ದಾರೆ. ನಾನು 65 ವರ್ಷಗಳ ರಾಜಕಾರಣದಲ್ಲಿ ನಿಜಲಿಂಗಪ್ಪ, ಜೆ.ಎಚ್.ಪಟೇಲ್, ಗುಂಡೂರಾವ್, ಬಂಗಾರಪ್ಪ, ರಾಮಕೃಷ್ಣ ಹೆಗಡೆ ಅವರಂತಹ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಯಾವ ರಾಜಕಾರಣಿಯೂ ಇಷ್ಟೊಂದು ಲಘುವಾಗಿ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಹಾಗೂ ದ್ವೇಷದಿಂದ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಪಮಾನವಲ್ಲ, ರಾಜ್ಯದ ಜನರಿಗೆ ಮಾಡಿದ ಅಪಮಾನ. ಟೀಕೆ ಮಾಡಿ, ಆದರೆ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಬಾರದು.

– ವಾಟಾಳ್‌ ನಾಗರಾಜ್‌

 

andolanait

Recent Posts

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ…

9 mins ago

ಕಾಡಾನೆ ದಾಳಿ ; ಜಮೀನಿನ ಶೀಟಿನ ಮನೆ, ಟೊಮೆಟೊ ಬೆಳೆ ನಾಶ

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ…

52 mins ago

ಏಪ್ರಿಲ್.‌11ರಂದು ಬೆಂಗಳೂರಿನಲ್ಲಿ ಜೆಡಿಎಸ್‌ ಜನತಾ ಸಮಾವೇಶ

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು…

2 hours ago

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ: ಇಬ್ಬರು ಸಾವು

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ…

2 hours ago

ತಮಿಳುನಾಡು ಚುನಾವಣೆ: ಎರಡು ಕ್ಷೇತ್ರಗಳಿಂದ ನಟ ವಿಜಯ್‌ ಸ್ಪರ್ಧೆ

ಚೆನ್ನೈ: ಏಪ್ರಿಲ್.23ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವುದಾಗಿ ನಟ ವಿಜಯ್‌ ಘೋಷಣೆ ಮಾಡಿದ್ದಾರೆ. ಚೆನ್ನೈನ…

2 hours ago

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

3 hours ago