ಮೈಸೂರು

ಕುಣಿಗಾಲ್ ಕುದುರೆ ಫಾರಂ ಪರಭಾರೆ ವಿರೋಧಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ!

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.

ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ ಫಾರಂಗೆ 400 ವರ್ಷಗಳ ಇತಿಹಾಸ ಇದ್ದು, ಇಲ್ಲಿ ಯಾವುದೇ ಕಾರಣಕ್ಕೂ ನಗರ ನಿರ್ಮಾಣ ಮಾಡಬಾರದು.

ಆಂಗ್ಲರು, ಟಿಪ್ಪು ಸುಲ್ತಾನ್ ಮೈಸೂರು ಅರಸರ ಆಳ್ವಿಕೆ ನೆನಪಿಸುತ್ತದೆ. ಕುಣಿಗಲ್ ಫಾರಂಗೆ ವಿಶ್ವದ ಮಾನ್ಯತೆ ಇದೆ. ಇಂತಹ ಫಾರಂ ಉಳಿಸಿಕೊಳ್ಳುವುದು ಸರಕಾರದ ಆದ್ಯ ಕರ್ತವ್ಯ. ಕುಣಿಗಲ್ ಕುದುರೆ ಫಾರಂ ಅನ್ನು ವಿಶ್ವದ ಜನ ಬಂದು ನೋಡುವಂತಹ ಸ್ಮಾರಕವಾಗಿ ಮಾಡಬೇಕು ಎಂದು ಒತ್ತಾಯಿಸಿದರು.

1992ರಲ್ಲಿ ಮಲ್ಯನ ಯುಬಿ ಸಂಸ್ಥೆಗೆ ಕೊಟ್ಟಾಗ ನಾನು ವಿರೋಧ ಮಾಡಿದ್ದೆ. ಆದರೆ, ಪರಭಾರೆ ಮಾಡಲು ಭಾರಿ ಕರಾಮತ್ತು ಇದೆ. 100 ಎಕರೆ ಬೆಂಗಳೂರು ಟರ್ಫ್ ಕ್ಲಬ್‌ಗೆ ಹಾಗೂ 321 ಎಕರೆ ಟೌನ್‌ ಷಿಪ್‌ ಗೆ ಬಳಸುವ ಪ್ರಸ್ತಾಪ ಇದೆ.

ಈ ಬಗ್ಗೆ ಜ.16ರಂದು ಬೆಂಗಳೂರಿನಲ್ಲಿ ಕುಣಿಗಲ್ ಕುದುರೆ ಫಾರಂ ಉಳಿಸಿ ಎಂದು ಹೋರಾಟ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

 

ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ವಿರುದ್ಧ ಏಕವಚನದಲ್ಲಿ ಮಾತನಾಡಿರುವ ಕುರಿತು ಪ್ರತಿಕ್ರಿಯಿಸಿ, ಹೆಗಡೆಯವರು ಎಂಪಿ ಆಗಿದ್ದಾರೆ. ನಾನು 65 ವರ್ಷಗಳ ರಾಜಕಾರಣದಲ್ಲಿ ನಿಜಲಿಂಗಪ್ಪ, ಜೆ.ಎಚ್.ಪಟೇಲ್, ಗುಂಡೂರಾವ್, ಬಂಗಾರಪ್ಪ, ರಾಮಕೃಷ್ಣ ಹೆಗಡೆ ಅವರಂತಹ ರಾಜಕಾರಣಿಗಳನ್ನು ನೋಡಿದ್ದೇನೆ. ಆದರೆ ಯಾವ ರಾಜಕಾರಣಿಯೂ ಇಷ್ಟೊಂದು ಲಘುವಾಗಿ ಮಾತನಾಡಿಲ್ಲ. ವೈಯಕ್ತಿಕ ವಿಚಾರ ಹಾಗೂ ದ್ವೇಷದಿಂದ ಸಿದ್ದರಾಮಯ್ಯ ಬಗ್ಗೆ ಮಾತನಾಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಅಪಮಾನವಲ್ಲ, ರಾಜ್ಯದ ಜನರಿಗೆ ಮಾಡಿದ ಅಪಮಾನ. ಟೀಕೆ ಮಾಡಿ, ಆದರೆ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಬಾರದು.

– ವಾಟಾಳ್‌ ನಾಗರಾಜ್‌

 

andolanait

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

1 hour ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago