ಮೈಸೂರು

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದತಿ ಹೋರಾಟಕ್ಕೆ ಸಜ್ಜಾಗಿ : ಮೈಸೂರಲ್ಲಿ ಸಿಎಂ ಕರೆ

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ತಿ. ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ ಆಯೋಜಿಸಲಾಗಿದ್ದ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳಿಂದ ನಡೆಸುವ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

2005 ರಲ್ಲಿ ಮನಮೋಹನ್ ಸಿಂಗ್ ಪ್ರಧಾನಿಗಳಾಗಿದ್ದಾಗ ಈ ಕಾನೂನು ಜಾರಿ ಮಾಡಿದರು. ಕೆಲಸದ ಹಕ್ಕು ಕೊಟ್ಟರು. ಅದನ್ನು ಕಿತ್ತುಹಾಕುತ್ತಿದ್ದಾರೆ. ಬಿಜೆಪಿಯವರು ಬಡವರು, ಹೆಣ್ಣುಮಕ್ಕಳು, ಕಾರ್ಮಿಕರಿಗೆ ಕೆಲಸ ಕೊಡಲು ಬಿಡುತ್ತಿಲ್ಲ. ನೀವು ಯಾವಾಗ ಕೇಳಿದರೂ ಉದ್ಯೋಗ ಕೊಡುವ ಕಾಯಿದೆಯನ್ನು ಜಾರಿ ಮಾಡಲಾಗಿತ್ತು. ಈಗ ಕೇಂದ್ರ ಸರ್ಕಾರ ಅದನ್ನು ತೀರ್ಮಾನಿಸಲಿದೆ. ವಿಬಿಜಿ ಗ್ರಾಮ್ ಜಿ ರದ್ದಾಗಬೇಕು. ಜನರನ್ನು ತಪ್ಪು ದಾರಿ ಎಳೆಯಲು ರಾಮ್ ಜಿ ಸೇರಿಸಿದ್ದಾರೆ. ಎಲ್ಲರೂ ಚಳುವಳಿಗೆ ತಯಾರಾಗಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಮನ್ರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಟ
ಕೇಂದ್ರ ಸರ್ಕಾರ ಇತೀಚೆಗೆ ಮನ್ರೇಗಾ ಬದಲಿಗೆ ವಿಬಿಜಿ ಗ್ರಾಮ್ ಜಿ ಎಂಬ ಕಾಯ್ದೆ ಜಾರಿಗೆ ತಂದಿದ್ದಾರೆ. ಇನ್ನು ಮುಂದೆ ನರೇಗಾ ಯೋಜನೆ ಇರುವುದಿಲ್ಲ. ನಮ್ಮ ಸರ್ಕಾರ ಮನ್ರೇಗಾ ಯೋಜನೆಯನ್ನು ಮುಂದುವರೆಸಲು ಹೋರಾಡುತ್ತಿದೆ. ದಲಿತರಿಗೆ, ಹೆಣ್ಣುಮಕ್ಕಳಿಗೆ ಮೂರು ದಿನ ಕೆಲಸ ಕೊಡುವ ಕಾಯ್ದೆ.ಅದು ಸಂವಿಧಾನದ ಹಕ್ಕು. ಅದನ್ನು ಯಾವುದೇ ಕಾರಣಕ್ಕೂ ರದ್ದು ಮಾಡಬಾರದೆಂಬ ಒತ್ತಡವನ್ನು ಹಾಕಲಾಗುತ್ತಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಸುಮಾರು 10,000ಕೋಟಿ ರೂಗಳ ಅಭಿವೃದ್ಧಿ ಕಾಮಗಾರಿಗಳು
ವಿರೋಧ ಪಕ್ಷದವರು ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರದಲ್ಲಿ ಅಭಿವೃದ್ಧಿಗೆ ಹಣವಿಲ್ಲ ಎಂಬ ಆರೋಪಗಳನ್ನು ಮಾಡುತ್ತಿದ್ದಾರೆ. ಎರಡುವರೆ ವರ್ಷಗಳಲ್ಲಿ 1932 ಕೋಟಿ ಗಳನ್ನು ಕೇವಲ ಅಭಿವೃದ್ಧಿಗಾಗಿಯೇ ವೆಚ್ಚ ಮಾಡಲಾಗಿದೆ. ಖಜಾನೆ ಖಾಲಿಯಾಗಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ. ಮೈಸೂರು ಜಿಲ್ಲೆಯಲ್ಲಿ ಸುಮಾರು 10.000 ಕೋಟಿ ರೂಗಳನ್ನು ವೆಚ್ಚ ಮಾಡಲಾಗಿದೆ. ಇದೇ ರೀತಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅಭಿವೃದ್ಧಿಗಾಗಿ ಸರ್ಕಾರ ಕ್ರಮ ಕೈಗೊಂಡಿದೆ. 1,15,000 ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗಿದೆ. ವಿರೋಧ ಪಕ್ಷದವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ
ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ. ಯತೀಂದ್ರ ಎಂದರು. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ. ನನ್ನ ಉಸಿರಿವವರೆವಿಗೂ ಜನರ ಸೇವೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಡಾ: ಎಂ.ಸಿ.ಸುಧಾಕರ್, ಸಂಸದ ಸುನೀಲ್ ಬೋಸ್, ವಿಧಾನ ಪರಿಷತ್ ಸದಸ್ಯರಾದ ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರು ಹಾಗೂ ರಾಜ್ಯ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮೇಲ್ಮನೆ ಸದಸ್ಯರಾದ ಡಾ: ತಿಮ್ಮಯ್ಯ, ಶಾಸಕ ರವಿಶಂಕರ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

49 mins ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

2 hours ago

ಮಾರ್ಚ್.‌11ರಿಂದ ವೈದ್ಯರ ಮುಷ್ಕರ ಫಿಕ್ಸ್:‌ ಸರ್ಕಾರಿ ಆಸ್ಪತ್ರೆಗಳ ಓಪಿಡಿ ಸೇವೆ ಬಂದ್‌

ಬೆಂಗಳೂರು: ರಾಜ್ಯದ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್.‌11ರಿಂದ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಕರೆ…

2 hours ago

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…

3 hours ago

ಶಾಸಕ ಬಸವರಾಜ್‌ ಶಿವಗಂಗಾ ಪಿಎ ಆತ್ಮಹತ್ಯೆಗೆ ಶರಣು

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್‌ ಶಿವಗಂಗಾ ಅವರ ಪಿಎ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರದ ಉಪ್ಪಾರಪೇಟೆ…

3 hours ago

ಕರೂರು ಕಾಲ್ತುಳಿತ ದುರಂತ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ನಟ ವಿಜಯ್‌ಗೆ ಮತ್ತೆ ಸಮನ್ಸ್‌

ಚೆನ್ನೈ: ನಟ ಹಾಗೂ ತಮಿಳಿಗ ವೆಟ್ರಿ ಕಳಗಂ ಪಕ್ಷದ ಅಧ್ಯಕ್ಷ ವಿಜಯ್‌ ಅವರಿಗೆ ಸಿಬಿಐ ಮತ್ತೆ ಸಮನ್ಸ್‌ ನೀಡಿದೆ. ಕಳೆದ…

3 hours ago