ಮೈಸೂರು

ಸಮಾಜ ಪರಿವರ್ತನೆಗೆ ಬೆಳಕು ಚೆಲ್ಲಿದ ವೇಮನ

ಮೈಸೂರು: ತಮ್ಮ ವಿಚಾರಧಾರೆಗಳ ಮೂಲಕ ಸಮಾಜ ಪರಿವರ್ತನೆಗೆ ಬೆಳಕು ಚೆಲ್ಲಿದ ವೇಮನ ಮಹಾನ್‌ ಸಂತ ಎಂದು ವಿಧಾನ ಪರಿಷತ್ ನ ಶಾಸಕ ಸಿ.ಎನ್‌ ಮಂಜೇಗೌಡ ಹೇಳಿದರು.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಕರ್ನಾಟಕ ಕಲಾಮಂದಿರ ಆವರಣದ ಕಿರುರಂಗಮಂದಿರಲ್ಲಿ ಭಾನುವಾರ ನಡೆದ ವೇಮನ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೇಮನ ಸಮಾಜದ ಎಲ್ಲಾ ವರ್ಗ ಜನರಿಗೆ ಜಾತಿ ಬೇಧಗಳನ್ನು ತೊರೆದು ಬೆಳಕನ್ನು ತರುವಂತಹ ಕಾರ್ಯವನ್ನು ಮಾಡಿದ್ದಾರೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಮಾತನಾಡಿ, ಮಹಾಯೋಗಿ ವೇಮನ ಅವರು ನಮ್ಮ ಇಡೀ ದೇಶಕ್ಕೆ ನೀಡಿರುವಂತಹ ಆದರ್ಶಗಳು ಬಹಳ ಸತ್ಯವಾಗಿವೆ ಇಂತಹ ಮಹಾನ್ ವ್ಯಕ್ತಿಗಳ ಜಯಂತಿಯ ಕಾರ್ಯಕ್ರಮವನ್ನು ಆಚರಿಸುತ್ತಾ ಇರುವುದು ಸಂತೋಷವನ್ನು ನೀಡುತ್ತದೆ ಎಂದು ಹೇಳಿದರು.

ಎಲ್ಲರೂ ಸಹ ಸಮಾನರು, ಯಾವುದೇ ಜಾತಿ ಬೇಧ ಇಲ್ಲದೆ ನಾವೆಲ್ಲರೂ ಒಂದು ಎಂಬುದನ್ನು ನಮಗೆ ತಿಳಿಸಿಕೊಟ್ಟಿರುವಂತಹ ವೇಮನಂತಹ ಮಹಾನ್ ದಾರ್ಶನಿಕರು ನಮಗೆ ದಾರಿದೀಪ ವಾಗಿದ್ದಾರೆ ಎಂದು ಹೇಳಿದರು.

ಬರೀ ನಾವು ಮಾತ್ರ ಜಯಂತಿಯನ್ನು ಆಚರಿಸುತ್ತೇವೆ ಎಂದು ಹೇಳದೆ ನಾವೆಲ್ಲರೂ ಸೇರಿ ಜಯಂತಿಯನ್ನು ಆಚರಿಸುತ್ತೇವೆ ಎಂಬ ಪರಿಕಲ್ಪನೆ ನಮ್ಮಲ್ಲಿ ಬರಬೇಕು ಎಂದು ತಿಳಿಸಿದರು.

ಸಾಹಿತ್ಯ ಎಂಬುದರಲ್ಲಿ ಒಂದು ವಿಶೇಷವಾದಂತಹ ಶಕ್ತಿ ಇದೆ. ಸಾಹಿತ್ಯವನ್ನು ಓದುವುದರಿಂದ ನಮ್ಮ ಜೀವನವನ್ನ ಯಾವ ರೀತಿ ಬದಲಾವಣೆ ಮಾಡಿಕೊಳ್ಳುತ್ತೇವೆ ಹಾಗೂ ಹೇಗೆ ನಮ್ಮ ಜೀವನವನ್ನು ರೂಪಿಸಿಕೊಳ್ಳುತ್ತೇವೆ ಎಂಬುದು ಬಹಳ ದೊಡ್ಡ ವಿಷಯವಾಗಿದೆ ಎಂದರು.

ಕೃಷ್ಣರಾಜನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾದ ಪ್ರೊ. ಮೈಸೂರು ಕೃಷ್ಣಮೂರ್ತಿ ಮಾತನಾಡಿ, ಭಾರತ ದೇಶವು ತತ್ವಜ್ಞಾನಿಗಳ ತವರು, ಭಾರತ ದೇಶದಲ್ಲಿ ಹುಟ್ಟಿರುವಂತಹ ತತ್ವಜ್ಞಾನಿಗಳು ಬೇರೆಲ್ಲೂ ಹುಟ್ಟಿಲ್ಲ ಬೇರೆ ಬೇರೆ ಕಾಲಘಟ್ಟಗಳಲ್ಲಿ ಕಾಣಿಸಿಕೊಂಡಿರುವಂತಹ ತತ್ವಜ್ಞಾನಿಗಳು ಈ ದೇಶವನ್ನು ಕಟ್ಟಿ ಬೆಳೆಸುವುದಕ್ಕೆ ಕೊಟ್ಟಿರುವಂತಹ ಕೊಡುಗೆ ಅಪಾರವಾಗಿದೆ. ಅವರಲ್ಲಿ ವೇಮನ ನಂತಹ ಸರ್ವಜ್ಞರು ಕೂಡ ನಮ್ಮ ದೇಶಕ್ಕೆ ಅಪಾರವಾದಂತದ ಕೊಡುಗೆಯನ್ನು ನೀಡಿದ್ದಾರೆ ಎಂದು ಹೇಳಿದರು.

ವೇಮನ ಅವರು ನಮಗೆ ವ್ಯಕ್ತಿ ಶೀಲವನ್ನು ಹೇಳಿಕೊಟ್ಟಿದ್ದಾರೆ, ಜೊತೆಗೆ ಸಮಾನತೆ ಮತ್ತು ಸತ್ಯ ಎಂಬ ಎರಡು ತತ್ವವನ್ನು ನೀಡಿದ್ದಾರೆ. ಎಲ್ಲಾ ಕಾಲವೂ, ಎಲ್ಲ ಸಮಾಜವು ನೆಮ್ಮದಿಯಿಂದ ಇರಲು ಈ ಎರಡು ತತ್ವಗಳು ಸಾಕು ಎಂದು ವೇಮನ ಅವರು ನಮಗೆ ತಿಳಿಸಿದ್ದಾರೆ ಇದಕ್ಕಿಂತ ನಮಗೆ ಇನ್ನೇನು ಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಅಧ್ಯಕ್ಷ ಅರುಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ. ಎನ್.ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕ ಡಾ. ಎಂ.ಡಿ ಸುದರ್ಶನ್, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಬಳಗದ ಅಧ್ಯಕ್ಷ ಡಾ. ಬಿ.ಎಂ ವಾಮದೇವ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೇಮಾವತಿ ನದಿ ಹಿನ್ನೀರಿನಲ್ಲಿ ಕಣ್ಮರೆಯಾಗಿದ್ದ ಇಬ್ಬರ ಮೃತದೇಹ ಪತ್ತೆ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…

59 mins ago

ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ: ಹಾರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್‌

ಟೆಹರಾನ್:‌ ಹಾರ್ಮುಜ್‌ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್‌ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…

1 hour ago

ರಾಜ್ಯದಲ್ಲಿ ನೈರುತ್ಯ ಮುಂಗಾರು ಮತ್ತೆ ದುರ್ಬಲ: ತೀವ್ರಗೊಂಡ ಬರದ ಛಾಯೆ

ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…

2 hours ago

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

3 hours ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

4 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

4 hours ago